ನೂತನ ಶಾಸಕರಿಗೆ ತರಬೇತಿ- ಸರ್ವಪಕ್ಷಗಳ ಜೊತೆಗೆ ಸಮಾಲೋಚಿಸಿ ನಿರ್ಣಯ: ಕಾಗೇರಿ

ಬೆಂಗಳೂರು: ನೂತನವಾಗಿ ಆಯ್ಕೆಯಾಗುವ ಶಾಸಕರಿಗೆ ತರಬೇತಿ ನೀಡಬೇಕಿದೆ. ಈ ಬಗ್ಗೆ ಸರ್ವಪಕ್ಷಗಳ ಜೊತೆಗೆ ಸಮಾಲೋಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಇಂದು (ನವೆಂಬರ್ 21) ಹೇಳಿಕೆ ನೀಡಿರುವ ಅವರು, ಉತ್ತಮ ವಿಧಾನಸಭೆ, ಪರಿಷತ್ ಪ್ರಶಸ್ತಿ ನೀಡಲು ಸಮಿತಿ ರಚನೆಗೆ ನಿರ್ಣಯ ಕೈಗೊಳ್ಳಲಾಗಿದೆ. ರಾಷ್ಟ್ರಪತಿ, ರಾಜ್ಯಪಾಲರ ಭಾಷಣ, ಪ್ರಶ್ನೋತ್ತರ ವೇಳೆ ಸದನದಲ್ಲಿ ಗದ್ದಲ ಆಗದಂತೆ ನೋಡಿಕೊಳ್ಳಲು ಸಮಾಲೋಚನೆ ಮಾಡಬೇಕಿದೆ. ಈ ಬಗ್ಗೆಯೂ ಸರ್ವಪಕ್ಷಗಳ ಜೊತೆಗೆ ಸಮಾಲೋಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ಸ್ಪೀಕರ್​ಗಳ ಸಮ್ಮೇಳನ ನಡೆದಿದೆ. 27 ರಾಜ್ಯಗಳ ಸ್ಪೀಕರ್​ಗಳು, ಸಚಿವಾಲಯದ ಕಾರ್ಯದರ್ಶಿ, ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು ಎಂದು ಸಮ್ಮೇಳನದ ಬಗ್ಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ.
ಶತಮಾನದ ಪಯಣ, ನಡೆಯಬೇಕಾದ ಮಾರ್ಗದ ಬಗ್ಗೆ ಚರ್ಚೆ ಮಾಡಲಾಗಿದೆ. ರಾಜ್ಯದಲ್ಲಿ ನಡೆದ ರೀತಿಯಲ್ಲೇ ಲೋಕಸಭಾ ಸ್ಪೀಕರ್ ಭಾಷಣ ಮಾಡಿದ್ದಾರೆ. ಇಲ್ಲಿ ಮಾಡಿದಂತೆ ಯಾರೂ ಅಲ್ಲಿ ವಿವಾದ ಮಾಡಲಿಲ್ಲ ಎಂದು ಕಾಗೇರಿ ಹೇಳಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement