ಭೀಕರ ಅಪಘಾತ:ಒಂದೇ ಕುಟುಂಬದ ಮೂವರ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

ಗದಗ: ಟ್ರ್ಯಾಕ್ಟರ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಮುಂಡರಗಿ ತಾಲೂಕಿನ ಡಂಬಳ- ಮೇವುಂಡಿ ಬಳಿ ನಡೆದಿದೆ.
ಮತ್ತೊಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರು ಹುಬ್ಬಳ್ಳಿಯ ನವನಗರದವರು ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರ್, ಟ್ರ್ಯಾಕ್ಟರ್‌ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮತ್ತೊಬ್ಬ ಮಹಿಳೆ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟ್ರ್ಯಾಕ್ಟರ್‌ ಮೆಕ್ಕೆ ಜೋಳ ತುಂಬಿಕೊಂಡು ಮುಂಡರಗಿಯಿಂದ ಗದಗ ಕಡೆಗೆ ಬರುತ್ತಿತ್ತು. ಮುಂಡರಗಿ ತಾಲೂಕಿನ ಶಿಂಗಟಾಲೂರ ವೀರಭದ್ರೇಶ್ವರ ದೇವರಿಗೆ ಪೂಜೆ ಸಲ್ಲಿಸಿ, ಮರಳಿ ಹುಬ್ಬಳ್ಳಿಗೆ ಕಾರಿನಲ್ಲಿ ಹೊರಟ್ಟಿದ್ರು ಎನ್ನಲಾಗಿದೆ.   ಡಿಕ್ಕಿ ರಭಸಕ್ಕೆ ಕಾರ್ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಈ ಕುರಿತು ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ಪ್ರಮುಖ ಸುದ್ದಿ :-   ಏಪ್ರಿಲ್‌ 20ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ, ಎರಡು ಚುನಾವಣಾ ಸಮಾವೇಶದಲ್ಲಿ ಭಾಗಿ

ನಿಮ್ಮ ಕಾಮೆಂಟ್ ಬರೆಯಿರಿ

advertisement