ಮಳೆ ಹಾನಿ: ಪರಿಹಾರ ಬಿಡುಗಡೆಗೆ ಆದೇಶಿಸಿದ್ದೇನೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅಪಾರ ಹಾನಿಯಾದ ಹಿನ್ನೆಲೆಯಲ್ಲಿ ಪರಿಹಾರ ಹಣ ಬಿಡುಗಡೆಗೆ ಅದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸೋಮವಾರ ಮಾತನಾಡಿದ ಅವರು, 500 ಕೋಟಿ ರಸ್ತೆದುರಸ್ತಿಗಾ ಕೊಟ್ಟಿದ್ದೇವೆ ಎಂದು ಮಾಹಿತಿ ನೀಡಿದರು. ಪೂರ್ಣ ಮನೆ ಹಾನಿಯಾದವರಿಗೆ ಒಂದು ಲಕ್ಷ ರೂ.ಗಳಂತೆ ಬಿಡುಗಡೆಗೆ ಸೂಚಿಸಿದ್ದೇನೆ. ಭಾಗಶಃ ಮನೆ ಹಾನಿಗೆ ಹಣ ಬಿಡುಗಡೆಗೆ ಆದೇಶಿಸಿದ್ದೇನೆ. ಬೆಳೆ ಸಮೀಕ್ಷೆ ಇಂದಿನಿಂದ ಶೀಘ್ರವಾಗಿ ನಡೆಯಬೇಕು. ಇದು ಪರಿಹಾರ ಆ್ಯಪ್‌ನಲ್ಲಿ ಎಂಟ್ರಿಯಾಗಬೇಕು ಆ ಮಾಹಿತಿಯಂತೆ ಪರಿಹಾರ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸಕ್ಕೆ ನೀತಿ ಸಂಹಿತೆ ಅಡ್ಡಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಮಳೆ ಹಾನಿ ಪ್ರದೇಶಗಳಿಗೆ ಸಂಬಂಧಪಟ್ಟ ಇಲಾಖೆಗಳ ಮಂತ್ರಿಗಳು ಭೇಟಿ ಕೊಡ್ತಾರೆ. ಆಯಾ ಇಲಾಖೆಗಳ ಸಚಿವರು ಮಳೆ ಪೀಡಿತ ಜಿಲ್ಲೆಗಳಿಗೆ ಭೇಟಿ ಕೊಡಬಹುದು. ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ಕೊಡುವಂತಿಲ್ಲ. ಇಲಾಖಾ ಸಚಿವರು ಭೇಟಿ ಕೊಡಲಿದ್ದಾರೆ ಎಂದು ಮಾಹಿತಿ ನೀಡಿದರು.

 

ನಿಮ್ಮ ಕಾಮೆಂಟ್ ಬರೆಯಿರಿ

advertisement