ಹೊನ್ನಾವರ: ಎರಡು ಕಂಟೇನರ್‌ಗಳಲ್ಲಿ ಸಾಗಾಟವಾಗುತ್ತಿದ್ದ 500 ಕ್ವಿಂಟಲ್ ಪಡಿತರ ಅಕ್ಕಿ ವಶ

ಹೊನ್ನಾವರ: ಮಂಗಳೂರು ಕಡೆಗೆ ಎರಡು ಕಂಟೇನರ್ ಲಾರಿಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಸುಮಾರು 500 ಕ್ವಿಂಟಲ್ ಅಕ್ಕಿಯನ್ನು ಹೊನ್ನಾವರ ಪೊಲೀಸರು ಲಾರಿ ಸಮೇತ ವಶಪಡಿಸಿಕೊಂಡಿದ್ದಾರೆ.
ಇದು ರೇಷನ್ ಅಕ್ಕಿ ಎಂದು ಹೇಳಲಾಗಿದೆ. ಈ ಅಕ್ಕಿ ಹಾವೇರಿ ಜಿಲ್ಲೆಯ ಅಕ್ಕಿ ಆಲೂರು ಕಡೆಯಿಂದ ಮಂಗಳೂರು ಕಡೆಗೆ ಹೊರಟಿತ್ತು ಎನ್ನಲಾಗಿದೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಆರೊಳ್ಳಿ ಬಳಿ ಅಕ್ಕಿ, ವಾಹನ ಸೇರಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
500 ಕ್ವಿಂಟಲ್ ಅಕ್ಕಿ ತುಂಬಿದ 2 ಲಾರಿಯನ್ನು ತಾಲೂಕು ತಹಶೀಲ್ದಾರ್ ಹಾಗೂ ಆಹಾರ ನಿರೀಕ್ಷಕರು ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ.
ಅಕ್ರಮ ಅಕ್ಕಿ ಸಾಗಾಣಿಕೆಯ ದೊಡ್ಡ ಜಾಲ ಹರಡಿದ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಹೊನ್ನಾವರ ಪೊಲೀಸರು ತನಿಖಾ ಕಾರ್ಯ ಚುರುಕುಗೊಳಿಸಿದ್ದಾರೆ. ಯಾರಿಗೂ ಕಾಣದ ರೀತಿಯಲ್ಲಿ ದೊಡ್ಡ ಕಂಟೇನರ್ ವಾಹನದಲ್ಲಿ ಸಾಗಿಸುತ್ತಿರುವುದನ್ನು ನೋಡಿದರೆ ಇದು ಅನ್ನ ಭಾಗ್ಯದ ಅಕ್ಕಿಯೇ ಎನ್ನುವ ಶಂಕೆ ವ್ಯಕ್ತವಾಗಿದೆ.
ದಾಳಿಯಲ್ಲಿ ಹೊನ್ನಾವರ ಸಿಪಿಐ ಶ್ರೀಧರ ಎಸ್. ಆರ್., ಪಿಎಸ್‍ಐ ಶಶಿ ಕುಮಾರ್, ನಿರಂಜನ್, ತಹಶೀಲ್ದಾರ್ ನಾಗರಾಜ ನಾಯ್ಕಡ್, ಆಹಾರ ನಿರೀಕ್ಷಕ ವೆಂಕಟ್ರಮಣ, ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement