ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದ ಇಬ್ಬರು ಯುವಕರು ಸಮುದ್ರಕ್ಕೆ ಇಳಿದ ವೇಳೆ ಒಬ್ಬ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ ಮೃತಪಟ್ಟ ಘಟನೆ ಸಮೀಪದ ತೂದಳ್ಳಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮೃತಪಟ್ಟವನನ್ನು ರಘುನಂದನ (17) ಕನಕಪುರ ಎಂದು ಗುರುತಿಸಲಾಗಿದೆ. ಬಸವರಾಜು ((21) ಎಂಬ ಮತ್ತೊಬ್ಬ ಯುವಕನನ್ನು ಲೈಫ್ ಗಾರ್ಡ್ ರಕ್ಷಿಸಿದ್ದಾರೆ. ಕನಕಪುರದಿಂದ 10 ಜನ ಯುವಕರು ಟೆಂಪೋ ಟ್ರಾಕ್ಸ್ ಮಾಡಿಕೊಂಡು ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದು ಮುರುಡೇಶ್ವರ ದೇವಸ್ಥಾನದಿಂದಮ1 ಕಿ.ಮೀ ದೂರದಲ್ಲಿರುವ ತೂದಳ್ಳಿಯ ಸಮುದ್ರದಲ್ಲಿ ಈಜುತ್ತಿದ್ದಾಗ ಆಕಸ್ಮಿಕವಾಗಿ ತೆರೆಯ ಹೊಡೆತಕ್ಕೆ ಈರ್ವರು ನೀರಿನಲ್ಲಿ ಮುಳುಗಿದ್ದಾರೆ. ರಘುನಂದನ್ ಸಮುದ್ರದ ಅಲೆಯಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿದ್ದು, ಕೆಲ ತಾಸುಗಳ ಬಳಿಕ ರಘುನಂದನ್ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ