ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಇಂದು (ಮಂಗಳವಾರ) ಕೊನೆಯ ದಿನವಾಗಿದೆ. ಸೋಮವಾರ ರಾತ್ರಿ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ಅಪ್ಪಾಜಿ ಗೌಡ (ಮಂಡ್ಯ), ಅನಿಲ್ ಕುಮಾರ (ತುಮಕೂರು), ಸಿ.ಎನ್. ಮಂಜೇಗೌಡ (ಮೈಸೂರು), ವಕ್ಕಲೇರಿ ರಾಮು (ಕೋಲಾರ), ಎಚ್.ಎಂ. ರಮೇಶ್ ಗೌಡ (ಬೆಂಗಳೂರು ಗ್ರಾಮಾಂತರ), ಎಚ್.ಯು. ಇಸಾಕ್ ಖಾನ್ (ಕೊಡಗು), ಸೂರಜ್ ರೇವಣ್ಣ (ಹಾಸನ) ಜೆಡಿಎಸ್ ಅಭ್ಯರ್ಥಿಗಳಾಗಿದ್ದಾರೆ.
ಸ್ಥಳೀಯ ಸಂಸ್ಥೆಗಳಿಂದ 25 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಈಗಾಗಲೇ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ಆಡಳಿತ ಪಕ್ಷ ಬಿಜೆಪಿ, ಪ್ರತಿಪಕ್ಷವಾಗಿರುವ ಕಾಂಗ್ರೆಸ್ಗೆ ಚುನಾವಣೆ ಪ್ರತಿಷ್ಠೆಯಾಗಿದ್ದರೆ, ಜೆಡಿಎಸ್ಗೆ ತನ್ನ ಅಸ್ತಿತ್ವ ಉಳಿಸಿಕೊಳ್ಳುವುದು ಸವಾಲಾಗಿದೆ.
ಪರಿಷತ್ ಚುನಾವಣೆ, 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ನಿಮ್ಮ ಕಾಮೆಂಟ್ ಬರೆಯಿರಿ