ಬೆಂಗಳೂರು:ರಾಜ್ಯಾದ್ಯಂತ 60 ಕಡೆ ದಾಳಿ ನಡೆದಿದ್ದು, ಬೆಂಗಳೂರಿನಲ್ಲಿಯೇ 30 ಕಡೆ ದಾಳಿ ನಡೆದಿದೆ.
ಬೆಂಗಳೂರಿನಲ್ಲಿ ಡಿವೈಎಸ್ಪಿ ರವಿಶಂಕರ್ ನೇತೃತ್ವದಲ್ಲಿ 20 ಕ್ಕೂ ಹೆಚ್ಚು ಅಧಿಕಾರಿಗಳು ನಾಲ್ವರು ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ.
ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಸಿಯೋಥರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಾಗಲಗುಂಟೆಯ ಗಿರಿ, ಮಂಗಳೂರು ಸ್ಮಾರ್ಟ್ ಸಿಟಿಯ ಇಇ ಕೆಎಸ್ ಲಿಂಗೇಗೌಡ, ಮಂಡ್ಯದ ಎಂಜಿನಿಯರ್ ಶ್ರೀನಿವಾಸ್, ದೊಡ್ಡಬಳ್ಳಾಪುರದ ರೆವೆನ್ಯೂ ಇನ್ಸ್ಪೆಕ್ಟರ್ ಲಕ್ಷ್ಮೀನರಸಿಂಹಯ್ಯ, ಬೆಂಗಳೂರು ನಿರ್ಮಿತಿ ಕೇಂದ್ರದ ಮಾಜಿ ಪ್ರೊಜೆಕ್ಟ್ ಮ್ಯಾನೇಜರ್ ವಾಸುದೇವ್,
ಬೆಂಗಳೂರು ನಂದಿನಿ ಡೈರಿಯ ಜನರಲ್ ಮ್ಯಾನೇಜರ್ ಕೃಷ್ಣರೆಡ್ಡಿ, ಗದಗ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿಎಸ್ ರುದ್ರೇಶಪ್ಪ, ಸಹಕಾರ ಇಲಾಖೆ ಅಧಿಕಾರಿ ಕೆ ಮಾಸ್ತಿ, ಗೋಕಾಕ್ ಹಿರಿಯ ಮೋಟಾರ್ ಇನ್ಸ್ಪೆಕ್ಟರ್ ಸದಾಶಿವ ಮಾರಲಿಂಗಣ್ಣನವರ್, ಬಳ್ಳಾರಿಯ ನಿವೃತ್ತ ಸಬ್ರಿಜಿಸ್ಟ್ರರ್ ಕೆ.ಎಸ್. ಶಿವಾನಂದ, ಜೇವರ್ಗಿ ಪಿಡಬ್ಲ್ಯೂಡಿ ಜೆಇ ಎಸ್ ಎಂ ಬಿರಾದರ್, ಬೆಳಗಾವಿ ಹೆಸ್ಕಾಂ ನೇತಾಜಿ ಹೀರಾಜಿ ಪಾಟೀಲ್ ಮನೆ ಮೇಲೆ ದಾಳಿ ನಡೆದಿದೆ.
15 ಅಧಿಕಾರಿಗಳ ಮೇಲೆ ನಿರಂತರ ದೂರು ಬಂದ ಹಿನ್ನೆಲೆ, 8 ಜನ ಎಸಿಬಿ, 100 ಎಸ್ಪಿ, 300 ಜನ ಸಿಬ್ಬಂದಿ ಸೇರಿ ಒಟ್ಟು 408 ಜನರಿಂದ ದಾಳಿ ನಡೆದಿದೆ.
ನಿಮ್ಮ ಕಾಮೆಂಟ್ ಬರೆಯಿರಿ