ಜಲಾಶಯದ ನೀರಿನಲ್ಲಿ ಆಟವಾಡುತ್ತಿದ್ದಾಗ ಕೊಚ್ಚಿಹೋದ ನಾಲ್ವರು…!

ತುಮಕೂರು: ಕುಣಿಗಲ್ ತಾಲೂಕಿನ ಗಡಿಭಾಗದಲ್ಲಿನ ಮಾರ್ಕೋನಹಳ್ಳಿ ಜಲಾಶಯದ ಕೋಡಿ ನೀರಿನಲ್ಲಿ ಆಟವಾಡಲು ಹೋದ ನಾಲ್ವರು ಕೊಚ್ಚಿ ಹೋದ ದುರಂತ ಘಟನೆ ಭಾನುವಾರ ನಡೆದಿದೆ.
ಪರ್ವಿನ್‍ತಾಜ್ (23) ಮತ್ತು ಸಾದೀಯ(17) ರಾಜು(23) ಮತ್ತು ಅಪ್ಪು(20) ನೀರಿನಲ್ಲಿ ಕೊಚ್ಚಿಹೋಗಿರುವ ಮೃತದುರ್ದೈವಿಗಳು. ಜಲಾಶಯದ ಕೋಡಿ ನೀರಿನಲ್ಲಿ ಆಟವಾಡಲು ಹೋದ ನಾಲ್ವರು ಕೊಚ್ಚಿ ಹೋಗಿದ್ದಾರೆ.
ಮಾಕೋರ್ನಹಳ್ಳಿ ಜಲಾಶಯವು ತುಂಬಿಕೊಂಡಿರುವ ಹಿನ್ನಲೆಯಲ್ಲಿ ಜಲಾಶಯಕ್ಕೆ ಪ್ರವಾಸಿಗರು ಹೆಚ್ಚಾಗುತ್ತಿದ್ದು, ಭಾನುವಾರ ರಜೆ ಇದ್ದ ಹಿನ್ನಲೆಯಲ್ಲಿ ಕೋಟೆ ಪ್ರದೇಶದ ಎರಡು ಕುಟುಂಬಗಳು ಜಲಾಶಯಕ್ಕೆ ಬಂದು ಮಾರ್ಕೋನಹಳ್ಳಿ ಬಲಭಾಗದ ಕೋಡಿ ಹಳ್ಳದಲ್ಲಿ ಆಟವಾಡುತ್ತಿದ್ದರು.
ಆಟವಾಡುತ್ತಾ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ದಿಢೀರ್‌ ಆಗಿ ಮಾರ್ಕೋನಹಳ್ಳಿ ಜಲಾಶಯಕ್ಕೆ ಎರಡು ಸಾವಿರ ಕ್ಯೂಸೆಕ್ಸ್ ಒಳ ಹರಿವು ಹೆಚ್ಚಾಗಿದೆ. ಕೋಡಿ ಸೈಪೋನ್ ನಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ನಾಲ್ವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ನೀರಿನಲ್ಲಿ ಆಟವಾಡುತ್ತಿದ್ದ ಬಾಲಕ 11 ವರ್ಷದ ತಬ್ರೇಜ್ ನೀರಿನಲ್ಲಿ ಕೊಚ್ಚಿಕೊಂಡು ಹೋಗುವಾಗ ಕುಟುಂಬಸ್ಥರು ಎಳೆದುಕೊಂಡು ಬಂದಿದ್ದಾರೆ.
ಸ್ಥಳದಲ್ಲಿದ್ದವರು ಅವರನ್ನು ರಕ್ಷಿಸಲು ಮುಂದಾದರೂ ಪ್ರಯೋಜನವಾಗಿಲ್ಲ ಎನ್ನಲಾಗಿದೆ. ಎಲ್ಲರೂ ನೋಡುತ್ತಿದ್ದಂತೆಯೇ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಕೊಚ್ಚಿ ಹೋಗಿರುವವರ ಹುಡುಕಾಟಕ್ಕಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಜಲಾಶಯದ ನೀರಿನ ಹೊರಹರಿವು ಹೆಚ್ಚಿರುವ ಕಾರಣ ಶವಗಳ ಹುಡುಕಾಟ ಕಾರ್ಯ ಕಷ್ಟವಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement