ಬಸ್-ಫಾರ್ಚುನರ್ ಕಾರು ಢಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ವಿಜಯಪುರ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಫಾರ್ಚುನರ್ ಕಾರು ಮಧ್ಯೆ ಮುಖಾಮುಖಿ ಡಿಕ್ಕಿಯಲ್ಲಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.
ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಭಾನುವಾರ ರಾತ್ರಿ ವಿಜಯಪುರ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಜುಮನಾಳ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.
ಮೃತರಲ್ಲಿ ಜಿಲ್ಲೆಯ ನಾಗಠಾಣ ಶಾಸಕ ದೇವಾನಂದ ಚವ್ಹಾಣ ಅವರ ಅಕ್ಕನ‌ಮಗ ವಿಜಯ ದೊಡಮನಿ (45), ಆತನ ಸ್ನೇಹಿತರಾದ ಚಿದಾನಂದ ನಾಗೇಶ ಸೂರ್ಯವಂಶಿ (45), ಸೋಮನಾಥ ಕಾಳೆ (43) ಹಾಗೂ ಸಂದೀಪ ಪವಾರ (40) ಎಂದು ಗುರುತಿಸಲಾಗಿದೆ. ಇವರು ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆ ನಾಂದೇಡ ಮೂಲದವರು. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆಎಸ್​ಆರ್​ಟಿಸಿ ಬಸ್​ನಲ್ಲಿ ತೆರಳುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಫಾರ್ಚುನರ್ ಕಾರಿನ ಅತೀವೇಗ ಹಾಗೂ ಚಾಲಕನ ಆಜಾಗರೂಕತೆ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಮದುವೆ ನಿಶ್ಚಿತಾರ್ಥಕ್ಕಾಗಿ ಗುತ್ತಿಯ ಬಾಡಿಗೆ ಪಡೆದಿದ್ದ ಬಸ್ ನರಗುಂದ ನಗರದತ್ತ ತೆರಳುತ್ತಿದ್ದಾಗ ಎದುರಿಗೆ ವೇಗವಾಗಿ ಬಂದ ಫಾರ್ಚುನರ್‌ ಕಾರು ಡಿಕ್ಕಿಯಾಗಿವೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement