ರಾಜ್ಯದಲ್ಲಿ ಲಾಕ್ ಡೌನ್ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ದಾವಣಗೆರೆ: ಸರ್ಕಾರದ ಮುಂದೆ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪ್ರಸ್ತಾವನೆ ಇಲ್ಲ. ಶಾಲಾ ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದಯೇ ಹೊರತು ಅವುಗಳಿಗೆ ರಜೆ ಕೊಡುವ ಅಥವಾ ಬಂದ್‌ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ಕುರಿತು ಜನತೆ ಭಯಪಡಬೇಕಿಲ್ಲ, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.
ರೂಪಾಂತರಿ ವೈರಸ್ ಕಂಡುಬಂದಿರುವ ದೇಶಗಳಿಂದ ಬಂದಿರುವವರ ಮೇಲೆ ನಿಗಾ ಇರಿಸಿದ್ದು, ಅವರ ಸಂಪರ್ಕಿತರ ಪತ್ತೆ ಹಚ್ಚಿ ಪರೀಕ್ಷಿಸಲಾಗುತ್ತಿದೆ. ವಿಮಾನ ನಿಲ್ದಾಣದಲ್ಲಿಯೂ ಕಟ್ಟುನಿಟ್ಟಿನ ಪರೀಕ್ಷೆ ಮಾಡುತ್ತಿದ್ದು, ವರದಿ ನೆಗಟಿವ್ ಬಂದರೆ ಮಾತ್ರ ನಗರದೊಳಗೆ ಪ್ರವೇಶಿಸಲು ಅನುಮತಿ ನೀಡಲಾಗುತ್ತಿದೆ ಎಂದರು.
ಓಮಿಕ್ರಾನ್ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮಕೈಗೊಳ್ಳುತ್ತಿದೆ. ಕೇರಳದಿಂದ ಪ್ರತಿಯೊಬ್ಬರನ್ನ ಕೋವಿಡ್ ಟೆಸ್ಟ ಮಾಡಲಾಗುತ್ತಿದೆ. 7ನೇ ದಿನಕ್ಕೆ ಮತ್ತೊಮ್ಮೆ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಜನರು ಹೆಚ್ಚಾಗಿ ಗುಂಪು ಸೇರುವುದನ್ನು ತಡೆಯಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಸರ್ಕಾರ ನಿರಂತರವಾಗಿ ತಜ್ಞರು ಮತ್ತು ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದೆ. ಕಾಲಕಾಲಕ್ಕೆ ಅವರು ನೀಡುವ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ದಕ್ಷಿಣ ಆಫ್ರಿಕಾದಿಂದ ಆಗಮಿಸಿರುವ ವ್ಯಕ್ತಿಯೊಬ್ಬರಿಗೆ ವಿಭಿನ್ನ ಲಕ್ಷಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ಗಾಗಿ ಐ.ಸಿ.ಎಂ.ಆರ್ ಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಅವರ ಸೋಂಕಿನಲ್ಲಿ ಕೋವಿಡ್‌ ಯಾವ ತಳಿ ಇದೆ ಎಂಬುದು ಎಂದು ತಿಳಿಯಲಿದೆ ಎಂದು ಹೇಳಿದರು.
ಬೂಸ್ಟರ್ ಡೋಸ್ ಬಗ್ಗೆ ಕೇಂದ್ರ ಸರ್ಕಾರದಿಂದ ನಿರ್ದೇಶನ ಬರಬೇಕಿದೆ. ನಮ್ಮ ಕಾಳಜಿ ಆರೋಗ್ಯ ಕಾರ್ಯಕರ್ತರದ್ದು. ಈಗಾಗಲೇ ಅವರು ಎರಡು ಡೋಸ್ ಪಡೆದು 6 ತಿಂಗಳ ಮೇಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement