ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅಮಾನತು, ಶಿಸ್ತು ಕ್ರಮಕ್ಕೆ ಚಾಲನೆ

ಮುಂಬೈ: ಹಫ್ತಾ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು ಮಹಾರಾಷ್ಟ್ರ ಸರ್ಕಾರ ಗುರುವಾರ ಅಮಾನತುಗೊಳಿಸಿದೆ.
ಅವರ ವಿರುದ್ಧ ಇರುವ ‘ಕೆಲವು ಅಕ್ರಮಗಳು ಹಾಗೂ ಲೋಪಗಳ’ ಆರೋಪದ ಮೇಲೆ ಅವರ ವಿರುದ್ಧ ಶಿಸ್ತು ಕ್ರಮ ಆರಂಭಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನವೆಂಬರ್ 12 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದಿನವೇ ಹಿರಿಯ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸುವ ಆದೇಶಕ್ಕೆ ಸಹಿ ಹಾಕಿದ್ದಾರೆ.
ಪರಮ್ ಬೀರ್ ಸಿಂಗ್ ಅವರು ಕರ್ತವ್ಯಕ್ಕೆ ಅನಧಿಕೃತವಾಗಿ ಗೈರುಹಾಜರಾಗಿರುವುದು ಲೋಪವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪರಮ್ ಬೀರ್ ಸಿಂಗ್ ಅವರು ಮಹಾರಾಷ್ಟ್ರ ಗೃಹರಕ್ಷಕ ದಳದ ಮುಖ್ಯಸ್ಥರಾಗಿ ನೇಮಕಗೊಂಡ ನಂತರ ಕಳೆದ ಆರು ತಿಂಗಳಿನಿಂದ ಅವರು ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಅನಾರೋಗ್ಯದ ಆಧಾರದ ಮೇಲೆ ಅವರಿಗೆ ಆಗಸ್ಟ್ 29ರ ವರೆಗೆ ರಜೆ ನೀಡಲಾಗಿತ್ತು, ಆದರೆ ನಂತರವೂ ಅವರು ಕರ್ತವ್ಯಕ್ಕೆ ಹಾಜರಾಗಲುವಿಫಲರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರು 100 ಕೋಟಿ ಹಫ್ತಾ ವಸೂಲಿ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು ಎಂದು ಪರಮ್ ಬೀರ್ ಸಿಂಗ್ ಗಂಭೀರ ಆರೋಪ ಮಾಡಿದ್ದರು. ಅಲ್ಲದೆ ಈ ಸಂಬಂಧ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದರು. ಮಹಾರಾಷ್ಟ್ರ ವಿಕಾಸ್ ಅಘಾಡಿಯಲ್ಲೂ ಈ ಪತ್ರ ತೀವ್ರ ಸಂಚಲನ ಮೂಡಿಸಿತ್ತು.
ಈ ಸಂಬಂಧ ಜುಲೈ 23 ರಂದು ಪರಮ್ ಬೀರ್ ಸಿಂಗ್, ಸಚಿನ್ ವಾಜೆ ಮತ್ತು ಇತರರ ವಿರುದ್ಧ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂಬೈ ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ.

ಪ್ರಮುಖ ಸುದ್ದಿ :-   ಉಗ್ರರ ದಾಳಿಯಲ್ಲಿ ಓರ್ವ ವಾಯುಪಡೆ ಸಿಬ್ಬಂದಿ ಹುತಾತ್ಮ, 5 ಮಂದಿಗೆ ಗಾಯ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement