ವಿದೇಶಕ್ಕೆ ಹೊರಟಿದ್ದ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸರನ್ನು ಮುಂಬೈ ವಿಮಾನ ನಿಲ್ದಾಣದಲ್ಲೇ ತಡೆದ ವಲಸೆ ಅಧಿಕಾರಿಗಳು

ಮುಂಬೈ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ವಲಸೆ ಅಧಿಕಾರಿಗಳು ಭಾನುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ತಡೆದಿದ್ದಾರೆ. ಶೋಗಾಗಿ ದುಬೈಗೆ ತೆರಳಬೇಕಿದ್ದ ಜಾಕ್ವೆಲಿನ್ ಅವರನ್ನು 200 ಕೋಟಿ ರೂಪಾಯಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ತನಿಖೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಭಾರತವನ್ನು ತೊರೆಯದಂತೆ ತಡೆಯಲಾಗಿದೆ. ಇಡಿ ಮೂಲಗಳ ಪ್ರಕಾರ, ಈಗ ನಟಿಯನ್ನು ವಿಚಾರಣೆಗಾಗಿ ದೆಹಲಿಗೆ ಕರೆತರಲಾಗುತ್ತದೆ … Continued

ತಿರುಪತಿ ಬಳಿ ಕಾರಿಗೆ ಬೆಂಕಿ ತಗುಲಿ ಆರು ಮಂದಿ ಸಜೀವ ದಹನ

ತಿರುಪತಿ,(ಆಂಧ್ರಪ್ರದೇಶ): ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಪೆಟ್ರೋಲ್‌ ಸೋರಿಕೆಯಿಂದಾಗಿ ಪ್ರಯಾಣಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಆರು ಮಂದಿ ಮೃತಪಟ್ಟಿದ್ದಾರೆ. ತಿರುಪತಿ ಬಳಿಯ ಪುತಲಪಟ್ಟು-ನಾಯ್ಡುಪೇಟ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಭಾನುವಾರ ತಿರುಪತಿ ಬಳಿಯ ಇತೇಪಲ್ಲಿಯಲ್ಲಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಪೆಟ್ರೋಲ್‌ ಸೋರಿಕೆಯಾಗಿ ಕಾರು ಬೆಂಕಿ ಹೊತ್ತಿಕೊಂಡಿದ್ದು, ಅಪಘಾತದಲ್ಲಿ ಒಂದು ಶಿಶು ಸೇರಿದಂತೆ ಆರು ಜನರು … Continued

ಪ್ರಧಾನಿ ಮೋದಿಯೇ ನನಗೆ ರಾಜೀನಾಮೆ ನೀಡಬೇಡಿ ಎಂದು ಹೇಳಿದ್ದರು: ದೇವೇಗೌಡ

ಮಂಡ್ಯ: ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದರೆ ರಾಜೀನಾಮೆ ನೀಡುವುದಾಗಿ ನಾನು ಘೋಷಿಸಿದ್ದೆ, ರಾಜೀನಾಮೆ ನಿರ್ಧಾರವನ್ನೂ ಮಾಡಿದ್ದೆ. ಆದರೆ ಪ್ರಧಾನಿ ಮೋದಿ ಅವರು ರಾಜೀನಾಮೆ ಕೊಡುವುದು ಬೇಡ ಎಂದು ಮನವೊಲಿಸಿದರು ಎಂದು ಮಾಜಿ ಪ್ರಧಾನಿ ದೇವೇಗೌಡರು ತಮ್ಮ ರಾಜೀನಾಮೆ ವಿಚಾರದ ಬಗ್ಗೆ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ … Continued

ರಾಜಸ್ಥಾನದಲ್ಲಿ 9, ಮಹಾರಾಷ್ಟ್ರದಲ್ಲಿ 7 ಪ್ರಕರಣಗಳು ಪತ್ತೆ, ಭಾರತದಲ್ಲಿ 21ಕ್ಕೇರಿದ ಒಟ್ಟು ಸಂಖ್ಯೆ

ನವದೆಹಲಿ: ಭಾರತದಲ್ಲಿ ಓಮಿಕ್ರಾನ್ ಕೋವಿಡ್‌-19 ರೂಪಾಂತರದ ಒಟ್ಟು ಪ್ರಕರಣಗಳ ಸಂಖ್ಯೆ 21 ಕ್ಕೆ ತಲುಪಿದೆ. ರಾಜಸ್ಥಾನದಲ್ಲಿ ಇಂದು ಭಾನುವಾರ, ಒಂಬತ್ತು ಹೊಸ ಪ್ರಕರಣಗಳು ವರದಿಯಾಗಿದೆ. ಡಿಸೆಂಬರ್ 5 ರಂದು ದಕ್ಷಿಣ ಆಫ್ರಿಕಾದಿಂದ ಜೈಪುರಕ್ಕೆ ಬಂದ ಕುಟುಂಬದ ಒಂಬತ್ತು ಜನರ ಮಾದರಿಗಳ ಜಿನೋಮ್ ಅನುಕ್ರಮವು ಓಮಿಕ್ರಾನ್ ರೂಪಾಂತರದ ಸೋಂಕನ್ನು ದೃಢಪಡಿಸಿದೆ. ಒಂಬತ್ತು ಓಮಿಕ್ರಾನ್ ರೋಗಿಗಳೊಂದಿಗೆ ಸಂಪರ್ಕಕ್ಕೆ ಬಂದ … Continued

ಭಾರತದಲ್ಲಿ 50% ಜನರಿಗೆ ಎರಡೂ ಲಸಿಕೆ ಪೂರ್ಣ

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿನ ಹೊಸ ರೂಪಾಂತರಿ ಓಮಿಕ್ರಾನ್ ಕಾಣಿಸಿಕೊಂಡು ಭೀತಿ ಸೃಷ್ಟಿ ಮಾಡಿರುವ ನಡುವೆಯೇ ಶೇ. 50 ರಷ್ಟು ಅರ್ಹ ಜನರಿಗೆ ಎರಡೂ ಡೋಸ್ ಲಸಿಕೆ ನೀಡುವ ಮೂಲಕ ದೇಶ ವಿಶ್ವದಲ್ಲಿ ಮೂರನೇ ಸ್ಥಾನಕ್ಕೆ ತಲುಪಿದೆ. ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಸೋಂಕಿನ ಲಸಿಕೆ ನೀಡಲಾಗುತ್ತಿದ್ದು ಅರ್ಹ ನಾಗರಿಕರ ಪೈಕಿ ಶೇ. 50ರಷ್ಟು … Continued

ಒಂದೇ ಶಾಲೆ 63 ವಿದ್ಯಾರ್ಥಿಗಳು ಸೇರಿ ಕರ್ನಾಟಕದ 456 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ನವೋದಯ ಶಾಲೆಯ 63 ವಿದ್ಯಾರ್ಥಿಗಳು ಸೇರಿದಂತೆ ಕರ್ನಾಟಕದ 456 ಮಂದಿಯಲ್ಲಿ ಭಾನುವಾರ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಆರು ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 7132 ಸಕ್ರಿಯ ಪ್ರಕರಣಗಳಿದ್ದಾರೆ. ಒಟ್ಟು 330 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ 29,98,099 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,52,708 ಜನರು ಚೇತರಿಸಿಕೊಂಡಿದ್ದಾರೆ. ಈವರೆಗೆ 38,230 … Continued

ಪುಣೆಯಲ್ಲಿ ಒಂದೇ ದಿನ ಏಳು ಓಮಿಕ್ರಾನ್ ಪ್ರಕರಣಗಳು ಪತ್ತೆ…! ಭಾರತದಲ್ಲಿ ಪ್ರಕರಣಗಳ ಸಂಖ್ಯೆ 12ಕ್ಕೆ ಏರಿಕೆ

ನವದೆಹಲಿ: ಮಹಾರಾಷ್ಟ್ರದಲ್ಲಿ ಇಂದು ಭಾನುವಾರ ಒಂದೇ ದಿನ ಏಳು ಪ್ರಕರಣಗಳು ಪತ್ತೆಯಾಗಿದೆ..! ಮಹಾರಾಷ್ಟ್ರದಲ್ಲಿ ಒಟ್ಟು ಎಂಟು ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ ಈಗ 12ಕ್ಕೆ ಏರಿದೆ..! ನವೆಂಬರ್ 24 ರಂದು ನೈಜೀರಿಯಾದ ಲಾಗೋಸ್‌ನಿಂದ ಪಿಂಪ್ರಿ-ಚಿಂಚ್‌ವಾಡ್ ಪುರಸಭೆ ವ್ಯಾಪ್ತಿಯಲ್ಲಿ ತನ್ನ ಸಹೋದರನನ್ನು ಭೇಟಿಯಾಗಲು ಬಂದಿದ್ದ 44 ವರ್ಷದ ಮಹಿಳೆ, ಅವಳ ಇಬ್ಬರು ಹೆಣ್ಣುಮಕ್ಕಳು, ಸಹೋದರ … Continued

ಮಗನ ಮದುವೆಗೆ ಬರೋಬ್ಬರಿ 4.28 ಕೇಜಿ ತೂಕದ ಮದುವೆ ಕಾರ್ಡ್ ಮಾಡಿಸಿದ ತಂದೆ…! ಕಾರ್ಡ್‌ ಬೆಲೆ..?

ಗಾಂಧಿನಗರ:ಭಾರತದಲ್ಲಿ ಜನರು ಮದುವೆಗಾಗಿ ಲಕ್ಷಾಂತರ ಹಣವನ್ನು ಖರ್ಚು ಮಾಡುತ್ತಾರೆ. ಅದೇ ರೀತಿ ಇಲ್ಲೊಬ್ಬರು ತನ್ನ ಮಗನ ಮದುವೆಗೆ ಆಮಂತ್ರಣದ ಕಾರ್ಡ್ ಭಿನ್ನವಾಗಿ ಮಾಡಿಸುವ ಮೂಲಕ ಸುದ್ದಿಯಾಗಿದ್ದಾರೆ. ಆ ಕಾರ್ಡ್ ಬರೋಬ್ಬರಿ 4 ಕೆಜಿ 280 ಗ್ರಾಂ ತೂಕವಿದೆ. ಆ ಕಾರ್ಡ್‍ನ ಬೆಲೆ ಏನಾದರು ಕೇಳಿದರೆ ಹೀಗೂ ಉಂಟೆ ಎಂದು ಹೇಳುವುದು ಪಕ್ಕಾ. ಗುಜರಾತಿ ಉದ್ಯಮಿ ಮೌಲೇಶಭಾಯ್ … Continued

ನಾಗಲ್ಯಾಂಡಿನಲ್ಲಿ ನಾಗರಿಕರ ಹತ್ಯೆ ದುರದೃಷ್ಟಕರ ಎಂದ ಸೇನೆ, ಉನ್ನತ ಮಟ್ಟದ ತನಿಖೆಗೆ ಆದೇಶ

ಗುವಾಹತಿ: ನಾಗಲ್ಯಾಂಡ್ ನ ಮೊನ್ ಜಿಲ್ಲೆಯಲ್ಲಿ ನಾಗರಿಕರ ಹತ್ಯೆಯ ಹೊಣೆಯನ್ನು ಭಾರತೀಯ ಸೇನೆ ಹೊತ್ತುಕೊಂಡಿದೆ. ಈ ಘಟನೆ ನಡೆದುದಕ್ಕೆ ವಿಷಾದವಿದೆ. ನಾಗರಿಕರ ಸಾವಿಗೆ ಕಾರಣ ಪತ್ತೆಹಚ್ಚಲು ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ನಾಗಲ್ಯಾಂಡ್ ನ ಡಿಮಪುರ್ ಮೂಲದ 3 ಕಾರ್ಪ್ಸ್ ಹೇಳಿಕೆಯಲ್ಲಿ ತಿಳಿಸಿದೆ. ದಂಗೆಕೋರರ ಚಲನವಲನದ ಖಚಿತ ಮಾಹಿತಿ … Continued

ಐವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ಕೋಟಾ(ರಾಜಸ್ಥಾನ): ರಾಜಸ್ಥಾನದ ಕೋಟಾದಲ್ಲಿ ನಡೆದ ದುರಂತ ಘಟನೆಯಲ್ಲಿ ತಾಯಿಯೊಬ್ಬಳು ತನ್ನ ಐವರು ಅಪ್ರಾಪ್ತ ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ರಾಜ್ಯದ ಕೋಟಾ ಜಿಲ್ಲೆಯ ಚೆಚಟ್ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಖೇಡಿ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಗ್ಗೆ ಗ್ರಾಮಸ್ಥರು ಆರು ಶವಗಳನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ತಾಯಿ … Continued