ಮಂಗಳೂರು: ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮಂಗಳೂರಿನ ಮಾರ್ಗನ್ಸ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು ಗಂಡ, ಹೆಂಡತಿ ಮತ್ತು ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ. ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ ನಾಗೇಶ ನೇಣು ಹಾಕಿಕೊಂಡು ಮೃತಪಟ್ಟಿದ್ದು, ಹೆಂಡತಿ ಮತ್ತು ಮಕ್ಕಳ ಮೃತದೇಹಗಳು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗಂಡ ನೇಣು ಹಾಕಿಕೊಳ್ಳುವ ಮೊದಲು ವಿಷ ಪ್ರಾಶನ ಮಾಡಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ನಾಗೇಶ್ ಶೇರಿಗುಪ್ಪೆ (30), ವಿಜಯಲಕ್ಷಿ(26), ಸಪ್ನ(8) ಮತ್ತು ಸಮಂತ್(4) ಮೃತರು ಎಂದು ಗುರುತಿಸಲಾಗಿದೆ. ಇವರುಗಳು ಮೂಲತಃ ಬಾಗಲಕೋಟೆ ಬೀಳಗಿಯ ಸುನಗ ಗ್ರಾಮದವರು ಎಂದು ಹೇಳಲಾಗಿದೆ. ನಾಗೇಶ್ ಚಾಲನಾಗಿ ಕೆಲಸ ಮಾಡುತ್ತಿದ್ದರೆ ವಿಜಯಲಕ್ಷ್ಮಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಸಾಮೂಹಿಕ ಆತ್ಮಹತ್ಯೆಗೆ ಕಾರಣ ತಿಳಿದುಬರಬೇಕಿದೆ.
ನಿಮ್ಮ ಕಾಮೆಂಟ್ ಬರೆಯಿರಿ