ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್​ ರಾವತ್ ದಂಪತಿ​ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್​ ಪತನ; 11 ಜನರು ಸಾವು

ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (CDS) ಬಿಪಿನ್ ರಾವತ್ ಮತ್ತು ಅವರ ಕೆಲವು ಕುಟುಂಬ ಸದಸ್ಯರಿದ್ದ ವಾಯುಪಡೆಯ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡಿದೆ. ಕುನ್ನೂರಿನಲ್ಲಿ ಪತನಗೊಂಡ ಹೆಲಿಕಾಪ್ಟರ್‌ನಲ್ಲಿ ಕೆಲವು ಹಿರಿಯ ಅಧಿಕಾರಿಗಳು ಇದ್ದರು. 14 ಮಂದಿಯಲ್ಲಿ 11 ಜನರು ಪ್ರಾಣ ಕಳೆದುಕೊಂಡಿದ್ದು, ಮೂವರನ್ನು ರಕ್ಷಿಸಲಾಗಿದೆ.
ಅದರಲ್ಲಿ ಸೇನೆಯ ಹಿರಿಯ ಅಧಿಕಾರಿಗಳು ಸೇರಿ ಒಟ್ಟು ಸಿಬ್ಬಂದಿ ಇದ್ದರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (CDS) ಬಿಪಿನ್​ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್​ ಕೂಡ ಇದ್ದರು ಎಂದು ಹೇಳಲಾಗುತ್ತಿದೆ. ಬಿಪಿನ್​ ರಾವತ್ ಗಾಯಗೊಂಡಿದ್ದಾರೆ, ಆದರೆ ಸುರಕ್ಷಿತವಾಗಿದ್ದಾರೆ ಎಂದು ಕೆಲವು ವರದಿಗಳು ಹೇಳಿವೆ,, ಆದರೆ ಅವರ ಸ್ಥಿತಿಯ ಬಗ್ಗೆ ಇನ್ನೂ ಯಾವುದೇ ದೃಢೀಕರಣ ಲಭ್ಯವಿಲ್ಲ. ಅವರಲ್ಲಿ ಈಗಾಗಲೇ ಮೂವರನ್ನು ರಕ್ಷಿಸಲಾಗಿದೆ. ಈ ಮೂವರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್​ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ನಡೆಯುತ್ತಿದೆ. ಮೂಲಗಳ ಪ್ರಕಾರ ಹೆಲಿಕಾಪ್ಟರ್‌ನಲ್ಲಿ ಹದಿನಾಲ್ಕು ಮಂದಿ ಇದ್ದರು.

ಪ್ರಮುಖ ಸುದ್ದಿ :-   ಬೆಂಗಳೂರು ಬಳಿ ಯುವತಿಗೆ ಕಿರುಕುಳ ನೀಡಿ, ಹಲ್ಲೆಗೈದ ಗ್ಯಾಂಗ್ ; ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಈ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮಾಡಿದೆ. ಸಿಡಿಎಸ್​ ಬಿಪಿನ್​ ರಾವತ್​ ಇದ್ದ IAF Mi-12V5 ಸೇನಾ ವಿಮಾನ ಇಂದು ತಮಿಳುನಾಡಿನ ಕುನೂರ್​ ಬಳಿ ಅಪಘಾತಕ್ಕೀಡಾಗಿದೆ. ಪತನಕ್ಕೆ ಕಾರಣವೇನು ಎಂಬುದನ್ನು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ. ಇನ್ನು ಹೆಲಿಕಾಪ್ಟರ್​ನಲ್ಲಿ 9 ಜನರಿದ್ದು, ಸಿಡಿಎಸ್​ ಬಿಪಿನ್​ ರಾವತ್, ಅವರ ಪತ್ನಿ ಮಧುಲಿಕಾ ರಾವತ್​, ಬ್ರಿಗೇಡಿಯರ್​ ಎಲ್​.ಎಸ್​.ಲಿಡ್ಡರ್​, ಲೆಫ್ಟಿನೆಂಟ್ ಕರ್ನಲ್​ ಹರ್ಜಿಂದರ್ ಸಿಂಗ್​, ನಾಯಕ್​ ಗುರುಸೇವಕ್​ ಸಿಂಗ್, ನಾಯಕ್​ ಜಿತೇಂದರ್​ ಕುಮಾರ್​, ಲ್ಯಾನ್ಸ್ ನಾಯಕ್​ ವಿವೇಕ್ ಕುಮಾರ್​, ಲ್ಯಾನ್ಸ್ ನಾಯಕ್​ ಬಿ ಸಾಯ್​ತೇಜ್​, ಹವಲ್ದಾರ್​ ಸತ್ಪಾಲ್​ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ.

ಸದ್ಯಕ್ಕಂತೂ ಸ್ಥಳದಲ್ಲಿ ಬೆಂಕಿಯ ಹೊಗೆ ಏಳುತ್ತಿದೆ. ಅಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಇನ್ನೂ ಹುಡುಕಾಟ ನಡೆಯುತ್ತಿದೆ. ಸದ್ಯ ಬಿಪಿನ್​ ರಾವತ್ ಮತ್ತು ಅವರ ಪತ್ನಿ ಯಾವ ಸ್ಥಿತಿಯಲ್ಲಿದ್ದಾರೆ ಎಂಬುದು ಗೊತ್ತಾಗಿಲ್ಲ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement