ಸೇನಾ ಹೆಲಿಕಾಪ್ಟರ್ ದುರಂತ : ಬದುಕುಳಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ಗೆ ಬೆಂಗಳೂರಲ್ಲಿ ಚಿಕಿತ್ಸೆ

ಬೆಂಗಳೂರು: ತಮಿಳುನಾಡಿನ ಕುನೂರ್‌ನಲ್ಲಿ ಬುಧವಾರ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಏಕಮಾತ್ರ ವ್ಯಕ್ತಿ ಭಾರತೀಯ ವಾಯುಪಡೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಗುರುವಾರ ವಿಶೇಷ ಏರ್ ಅಂಬುಲೆನ್ಸ್ ಮೂಲಕ ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ತರಲಾಗಿದೆ.
ತಮಿಳುನಾಡಿನ ವೆಲ್ಲಿಂಗ್ಟನ್‌ನಲ್ಲಿರುವ ಸೇನಾ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅವರ ತಂದೆ ತಿಳಿಸಿದ್ದಾರೆ.
ಗುರುವಾರ ಸಂಜೆ 4ಗಂಟೆ ಸಂದರ್ಭದಲ್ಲಿ ಏರ್ ಅಂಬುಲೆನ್ಸ್ ಮೂಲಕ ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಕರೆ ತರಲಾಗಿದ್ದು ಝಿರೋ ಟ್ರಾಫಿಕ್ ವ್ಯವಸ್ಥೆ ಯಲ್ಲಿ ಕಮಾಂಡೋ ಆಸ್ಪತ್ರೆಗೆ ಕರೆತರಲಾಗಿದೆ. ಹೆಲಿಕಾಪ್ಟರ್ ಪತನದ ಸಂದರ್ಭದಲ್ಲಿ ಬೆಂಕಿ ತಗುಲಿ ಸುಟ್ಟಗಾಯಗಳಾಗಿ ಗಂಭೀರ ಸ್ಥಿತಿಯಲ್ಲಿರುವ ವರುಣ್ ಸಿಂಗ್ ಅವರನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ಪ್ರಯತ್ನವನ್ನು ಸೇನೆ ನಡೆಸುತ್ತಿದೆ.

0 / 5. 0

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ನಿಮ್ಮ ಕಾಮೆಂಟ್ ಬರೆಯಿರಿ

advertisement