ಬೆಳಗಾವಿ-ಕಿತ್ತೂರು-ಧಾರವಾಡ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲು ಸಿಎಂ ಬೊಮ್ಮಾಯಿಗೆ ಸಂಸದೆ ಮಂಗಲಾ ಅಂಗಡಿ ಮನವಿ

ಬೆಳಗಾವಿ :ಕುಂಟುತ್ತ ಸಾಗಿರುವ ಕಿತ್ತೂರು- ಧಾರವಾಡ ರೈಲು ಮಾರ್ಗಕ್ಕೆ ಶೀಘ್ರ ಆಡಳಿತಾತ್ಮಕ ಅನುಮೋದನೆ ನೀಡುವಂತೆ ಸಂಸದೆ ಮಂಗಲಾ ಅಂಗಡಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಮಾಡಿದ್ದಾರೆ.
ಬೆಳಗಾವಿ-ಕಿತ್ತೂರು-ಧಾರವಾಡ ನೂತನ ರೈಲ್ವೆ ಮಾರ್ಗ ಈ ಭಾಗದ ಜನರ ದಶಕಗಳ ಕನಸು. ಈ ಮಾರ್ಗ ನಿರ್ಮಾಣದಿಂದ ಜನತೆಗೆ ಸಾಕಷ್ಟು ಅನುಕೂಲ ಆಗುತ್ತದೆ. ಶೈಕ್ಷಣಿಕ, ಆರ್ಥಿಕ, ಕೈಗಾರಿಕಾ ದೃಷ್ಟಿಯಿಂದಲೂ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ನಾನಾವಾಡಿ – ಸಾವಗಾಂವ ರಸ್ತೆ ಅಭಿವೃದ್ಧಿಪಡಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಬೇಕು . ಅತಿವೃಷ್ಟಿ, ಪ್ರವಾಹದ ಸಂದರ್ಭದಲ್ಲಿ ಹಾಳಾದ ರಸ್ತೆಗಳ ಸುಧಾರಣೆಗೂ ತುರ್ತು ಅನುಮೋದನೆ ಕೊಡಬೇಕು ಎಂದು ಮನವಿ ಮಾಡಿದರು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

0 / 5. 0

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ನಿಮ್ಮ ಕಾಮೆಂಟ್ ಬರೆಯಿರಿ

advertisement