ಪೂಂಚ್: ಪಾಕಿಸ್ತಾನದ ಉಗ್ರ ಅಬು ಜರಾರ್ನನ್ನು ಭಾರತೀಯ ಭದ್ರತಾ ಪಡೆಗಳು ಇಂದು, ಮಂಗಳವಾರ ಹೊಡೆದುರುಳಿಸಿವೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್-ರಜೌರಿ ಪ್ರದೇಶದಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿಗಳನ್ನು ನಡೆಸುವ ಜವಾಬ್ದಾರಿಯನ್ನು ಜರಾರ್ ವಹಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವರ್ಷದ ಆಗಸ್ಟ್ನಲ್ಲಿ ಪೂಂಚ್ ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಪಾಕಿಸ್ತಾನಿ ಪ್ರಜೆ ಜರಾರ್
ಭದ್ರತಾ ಪಡೆಗಳ ಮೇಲೆ ದಾಳಿಗಳನ್ನು ನಡೆಸುವುದರ ಹೊರತಾಗಿ ರಜೌರಿ-ಪೂಂಚ್ ಪ್ರದೇಶದಲ್ಲಿ ಭಯೋತ್ಪಾದನೆ ಮತ್ತೆ ಗಟ್ಟಿಗೊಳಿಸುವ ಜವಾಬ್ದಾರಿ ಹೊಂದಿದ್ದ. ಅಬು ಜರಾರ್ನನ್ನು ಹತ್ಯೆ ಮಾಡಿರುವುದು ಭದ್ರತಾ ಪಡೆಗಳಿಗೆ ದೊಡ್ಡ ಯಶಸ್ಸು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಬು ಜರಾರ್ ಪೂಂಚ್-ರಜೌರಿ ಬೆಲ್ಟ್ನ ನಿಯಂತ್ರಣ ರೇಖೆಯ ಬಳಿ ಹತ್ಯೆಗೀಡಾದ ಎಂಟನೇ ಭಯೋತ್ಪಾದಕ. ಕಳೆದ ತಿಂಗಳು ಭದ್ರತಾ ಪಡೆಗಳು ಭಯೋತ್ಪಾದಕ-ಮಾರ್ಗದರ್ಶಿ ಹಾಜಿ ಆರಿಫ್ನನ್ನು ಹೊಡೆದುರುಳಿಸಿದ್ದವು. ಭಾರತೀಯ ಸೇನೆಯು ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿ ಪ್ರಯತ್ನದಲ್ಲಿ ಸ್ಥಳೀಯರು ಶಂಕಿತರ ಚಲನವಲನದ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಒದಗಿಸಿದಾಗ ಅವರು ನೀಡಿದ ಮಾಹಿತಿಯ ಆಧಾರದ ಮೇಲೆ ಅವರ ಮೊಬೈಲ್ ಮಾತುಕತೆಯ ಮೇಲೆ ನಿಗಾ ಇಡಲಾಯಿತು ಎಂದು ಅವರು ಹೇಳಿದ್ದಾರೆ.
ಇಂದು ನಡೆದ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸುವ ಮೂಲಕ ಭಯೋತ್ಪಾದಕರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ, ಮೋಸ್ಟ್ ವಾಂಟೆಡ್ ಉಗ್ರನನ್ನು ಈ ವೇಳೆ ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದೆ. ಆದರೆ ಅವನ ಸಹಚರನು ಪರಾರಿಯಾಗಿದ್ದಾನೆ. ಅವನಿಗಾಗಿ ಶೋಧ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ