ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವಂತ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಪರಿಷತ್ತಿಲ್ಲಿ ಅಶಿಸ್ತು ತೋರಿದ 14 ಕಾಂಗ್ರೆಸ್ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡಿ, ಸಭಾಪತಿ ಬಸವರಾಜ ಹೊರಟ್ಟಿ ಆದೇಶ ಮಾಡಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಅಶಿಸ್ತು ತೋರಿದ ಕಾರಣ ನೀಡಿ, ಸಭಾಪತಿ ಬಸವರಾಜ ಹೊರಟ್ಟಿಯವರು ವಿಪಕ್ಷ ನಾಯಕ ಎಸ್. ಆರ್. ಪಾಟೀಲ್ ಸೇರಿದಂತೆ 14 ಕಾಂಗ್ರೆಸ್ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಕಲಾಪದಿಂದ ಅಮಾನತುಗೊಳಿಸಿದ್ದಾರೆ. ಸಿ.ಎಂ. ಇಬ್ರಾಹಿಂ, ಪಿ.ಆರ್. ರಮೇಶ್, ಪ್ರತಾಪ್ ಚಂದ್ರ ಶೆಟ್ಟಿ, ಎಸ್. ಆರ್. ಪಾಟೀಲ್, ಪಿ.ಆರ್. ರಮೇಶ್, ನಾರಾಯಣ ಸ್ವಾಮಿ, ಬಿ.ಕೆ. ಹರಿಪ್ರಸಾದ್, ಯು.ಬಿ. ವೆಂಕಟೇಶ, ವೀಣಾ ಅಚ್ಚಯ್ಯ ಸೇರಿದಂತೆ 14 ಮಂದಿಯನ್ನು ಅಮಾನತು ಮಾಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ