ಉತ್ತರ ಕನ್ನಡ ಜಿಲ್ಲೆ ಕುಳವಾಡಿ ಮರಾಠಿ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ: ಸಚಿವರಿಗೆ ಮನವಿ

ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ ಕುಳವಾಡಿ ಮರಾಠಿ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರವನ್ನು ನೀಡುವಂತೆ ಇಂದು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರ ನೇತೃತ್ವದ ನಿಯೋಗವು ಕಾನೂನು ಸಂಸದೀಯ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ಸಚಿವರಾದ ಶಿವರಾಮ ಹೆಬ್ಬಾರ್ ಅವರು, ಉತ್ತರಕನ್ನಡ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ವಾಸವಾಗಿರುವ ಅತ್ಯಂತ ಹಿಂದುಳಿದ ಕುಳವಾಡಿ ಮರಾಠಿ ಸಮಾಜದವರು ಜಾತಿ ಪ್ರಮಾಣ ಪತ್ರವನ್ನು ಪಡೆಯಲು ಉಂಟಾಗಿರುವ ತೊಡಕುಗಳ ಬಗ್ಗೆ ವಿಸ್ತೃತವಾಗಿ ಸಚಿವ ಮಾಧುಸ್ವಾಮಿ ಅವರಿಗೆ ವಿವರಿಸಿದರು, ಹಾಗೂ ಆಗುತ್ತಿರುವ ತೊಂದರೆಗಳ ಬಗ್ಗೆ ಸಚಿವರ ಗಮನಕ್ಕೆ ತಂದರು. ಸಚಿವ ಜೆ.ಸಿ. ಮಾಧುಸ್ವಾಮಿ ಅವರು ನಿಯೋಗವು ನೀಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿ, ಗಣಪತಿ ಉಳ್ವೇಕರ್, ಕುಳವಾಡಿ ಮರಾಠಿ ಸಮುದಾಯದ ಪ್ರಮುಖರಾದ ರಾಮು ನಾಯ್ಕ, ಅಣಪ್ಪ ಮರಾಠಿ, ಉಲ್ಲಾಸ ಮರಾಠಿ, ವಿನೋದ ತಳೇಕರ್ ಮೊದಲಾದವರು ಉಪಸ್ಥಿತರಿದ್ದರು.

ನಿಮ್ಮ ಕಾಮೆಂಟ್ ಬರೆಯಿರಿ

advertisement