ಬೆಳಗಾವಿ: ಅನೇಕ ವರ್ಷಗಳು ಕಳೆದರೂ ಕೈಗಾರಿಕೆ ಪ್ರಾರಂಭ ಮಾಡದ 500ಕ್ಕೂ ಹೆಚ್ಚು ಕೈಗಾರಿಕೆಗಳ ಜಮೀನನ್ನು ವಾಪಸ್ ಪಡೆಯಲಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಶುಕ್ರವಾರ ವಿಧಾನಸಭೆಗೆ ತಿಳಿಸಿದರು.
ಕಾಂಗ್ರೆಸ್ ಶಾಸಕ ಎನ್. ಎಚ್. ಶಿವಶಂಕರ ರೆಡ್ಡಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭೂಮಿ ಹಂಚಿಕೆಯಾಗಿ 5 ರಿಂದ 20 ವರ್ಷ ಕಳೆದರೂ ಕೈಗಾರಿಕೆ ಪ್ರಾರಂಭ ಮಾಡದ ಭೂಮಿಯನ್ನು ವಾಪಸ್ ಪಡೆಯಲಾಗುವುದು. ಈಗಾಗಲೇ ಅವುಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.
ಕಾರ್ಖಾನೆ ಪೂರ್ಣವಾಗಿ ಪ್ರಾರಂಭಿಸದಿದ್ದರೆ ಸೇಲ್ ಡೀಡ್ ಮಾಡಿಕೊಡುವುದಿಲ್ಲ. ಸೇಲ್ ಡೀಡ್ ಆಗದೆ ಅವರು ಕೈಗಾರಿಕಾ ಭೂಮಿಯನ್ನು ರಿಯಲ್ ಎಸ್ಟೇಟ್ಗೆ ಬಳಸಿಕೊಳ್ಳಲು ಅವಕಾಶವಿಲ್ಲ. ಕೈಗಾರಿಕೆಗೆ ಹಂಚಿಕೆಯಾದ ಜಮೀನಿನಲ್ಲಿ ಶೇ. 15 ರಷ್ಟು ವಸತಿಗೆ ಮೀಸಲಿಡಬೇಕು ಎಂದು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ