ಶಿವಾಜಿ ಪ್ರತಿಮೆಗೆ ಮಸಿ -ರಾಯಣ್ಣ ಪ್ರತಿಮೆ ಭಗ್ನ ಕೃತ್ಯ ಸಹಿಸಲಾಗದು: ಕೇಂದ್ರ ಸಚಿವ ಜೋಶಿ

ನವದೆಹಲಿ : ದೇಶಕ್ಕಾಗಿ ತ್ಯಾಗ ಮಾಡಿದ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಹಾಗೂ ರಾಯಣ್ಣ ಪ್ರತಿಮೆ ಭಗ್ನ ಮಾಡಿದ ಕೃತ್ಯವನ್ನು ಯಾರೂ ಸಹಿಸುವುದಿಲ್ಲ, ಇದು ಖಂಡನಾರ್ಹ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಬೆಂಗಳೂರಿನ ಸ್ಯಾಂಕಿ ಕೆರೆ ಬಳಿಯ ಛತ್ರಪತಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಕೃತ್ಯದ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ಸೂಚಿಸುತ್ತೇನೆ ಎಂದು ಹೇಳಿರುವ ಸಚಿವ ಜೋಶಿ, ಸಂಗೊಳ್ಳಿ ರಾಯಣ್ಣ, ಶಿವಾಜಿ   ಇಬ್ಬರೂ ದೇಶಭಕ್ತರು. ಇವರು ಭಾಷೆ, ಸಮುದಾಯ ಎಲ್ಲವನ್ನೂ ಮೀರಿ ಬೆಳೆದವರು. ಇಂತಹವರ ಪ್ರತಿಮೆಗಳಿಗೆ ಮಸಿ ಬಳಿಯುವಂತಹ ಹೀನ ಕೃತ್ಯಕ್ಕೆ ಇಳಿಯಬಾರದು ಎಂದೂ ಜೋಶಿ ಹೇಳಿದ್ದಾರೆ. ಸರ್ಕಾರ ಕಾನೂನು ಭಂಗ ಮಾಡುವವರಿಗೆ ಅವಕಾಶ ನೀಡುವುದಿಲ್ಲ, ದೇಶಭಕ್ತರಿಗೆ ಗೌರವ ಕೊಡಬೇಕು ಎಂದು ನಾನು ಎಲ್ಲರಿಗೂ ಈ ಮೂಲಕ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಬೆಳಗಾವಿ ಹಾಗೂ ಬೆಂಗಳೂರಿನ ಘಟನೆಗಳ ಬಗ್ಗೆ ಸಂಬಂಧಿಸಿದಂತೆ ಪೊಲೀಸ್ ಹಾಗೂ ಇತರ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಿಕೊಳ್ಳಲು ಎಲ್ಲಾ ಅಗತ್ಯ ಕ್ರಮಗಳನ್ನು, ತೆಗೆದುಕೊಳ್ಳಲು ನಿರ್ದೇಶಿಸಿದ್ದೇನೆ. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿರುವುದು, ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ಭಗ್ನ, ವಾಹನಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನವದೆಹಲಿಯಿಂದ ಕರ್ನಾಟಕದ ಮುಖ್ಯಮಂತ್ರಿಗಳು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿರುವುದಾಗಿ ಜೋಶಿ ತಿಳಿಸಿದ್ದಾರೆ.
ದೇಶಕ್ಕಾಗಿ ತ್ಯಾಗ ಮಾಡಿದ್ದಕ್ಕೆ ಅವರ ಮೂರ್ತಿ ಸ್ಥಾಪಿಸಲಾಗಿದೆ. ನಮ್ಮ ಸರ್ಕಾರ ಇಂತಹ ಘಟನೆಗಳನ್ನು ಸಹಿಸುವುದಿಲ್ಲ. ಏನೇ ಹೇಳುವುದಿದ್ದರೂ ಶಾಂತವಾಗಿ ಹೇಳಬೇಕು. ದೇಶಭಕ್ತರಿಗೆ ಗೌರವ ಕೊಡಬೇಕು ಎಂದು ನಾನು ಎಲ್ಲರಲೂ ಮನವಿ ಮಾಡುತ್ತೇನೆ. ಇಂತಹ ಕೃತ್ಯಗಳು ನಡೆದಾಗ ರಾಜಕೀಯ ವ್ಯಕ್ತಿಗಳು ತಮ್ಮ ಬೇಳೆ ಬೇಯಿಸಿಕೊಳ್ಳುವ ಕೃತ್ಯಕ್ಕೆ ಕೈ ಹಾಕಬಾರದು ಎಂದು ಕೇಂದ್ರ ಸಚಿವ ಜೋಶಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement