ಶಿವಾಜಿ ಪ್ರತಿಮೆಗೆ ಮಸಿ : 7 ಜನರ ಬಂಧನ

ಬೆಂಗಳೂರು: ಕೊಲ್ಲಾಪುರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ್ದನ್ನು ಖಂಡಿಸುವ ಭರದಲ್ಲಿ ಬೆಂಗಳೂರಿನ ಸದಾಶಿವನಗರದ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಣಧೀರ ಪಡೆಯ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಉಳಿದ 6 ಜನರಿಗಾಗಿ ಶೋಧ ಮುಂದುವರಿದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಡಿಸೆಂಬರ್ 17ರಂದು ಡಸ್ಟರ್ ಕಾರ್‌ನಲ್ಲಿ 6, ಆಟೋ, ಬೈಕ್‍ನಲ್ಲಿ 7 ಜನ ಬಂದು ಸ್ಯಾಂಕಿಕೆರೆ ಸಿಗ್ನಲ್ ಬಳಿ ಇರುವ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದರು. ಬಳಿಕ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.

0 / 5. 0

ಪ್ರಮುಖ ಸುದ್ದಿ :-   ಅಶ್ಲೀಲ‌ ವೀಡಿಯೊ ಇಟ್ಟುಕೊಳ್ಳುವುದು ಅಪರಾಧ, ಡಿಲೀಟ್‌ ಮಾಡಿ : ಎಸ್‌ಐಟಿ ಮುಖ್ಯಸ್ಥರು

ನಿಮ್ಮ ಕಾಮೆಂಟ್ ಬರೆಯಿರಿ

advertisement