ವಿಜಯನಗರ: ಮೂರು ದಿನಗಳ ಹಿಂದೆ ವಿಜಯನಗರ ಪೊಲೀಸರು ಒಂದುವರೆ ಕೋಟಿ ತಿಮಿಂಗಿಲ ವಾಂತಿ ವಶಪಡಿಸಿಕೊಂಡಿದ್ದರು. ಪ್ರಕರಣದ ಬೆನ್ನುಹತ್ತಿದ ಅವರಿಗೆ ಬರೋಬ್ಬರಿ 10 ಕೋಟಿ ರೂ. ಮೌಲ್ಯದ ತಿಮಿಂಗಿಲದ ವಾಂತಿ (ಎಂಬರ್ ಗ್ರೀಸ್) ಸಿಕ್ಕಿದೆ.
ಡಿಸೆಂಬರ್ 21ರಂದು ವಿಜಯನಗರ ಬಸ್ ನಿಲ್ದಾಣದ ಸುತ್ತ-ಮುತ್ತ ಇಬ್ಬರು ಅನುಮಾನಸ್ಪಾದವಾಗಿ ಓಡಾಡುತ್ತಿದ್ದರು. ಈ ಹಿನ್ನೆಲೆ ಖಚಿತ ಮಾಹಿತಿ ಪಡೆದುಕೊಂಡು ಇಬ್ಬರನ್ನೂ ಹೊಸಪೇಟೆ ಪಟ್ಟಣ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ವಿಚಾರಣ ವೇಳೆ ಅವರ ಬಳಿ ಒಂದೂವರೆ ಕೆಜಿ ತಿಮಿಂಗಿಲ ವಾಂತಿ ಪತ್ತೆಯಾಗಿತ್ತು. ಇಬ್ಬರನ್ನು ವಿಚಾರಣೆ ಮಾಡಿದಾಗ ಅವರು ಇನ್ನು ನಾಲ್ವರ ಹೆಸರನ್ನು ಪೊಲೀಸರ ಮುಂದೆ ಹೇಳಿದ್ದಾರೆ. ಪರಿಣಾಮ ಈ ನಾಲ್ವರು ಸೇರಿದಂತೆ ಒಟ್ಟು ಆರು ಜನರನ್ನ ಪೊಲೀಸರು ಅರೆಸ್ಟ್ ಮಾಡಿ ಒಂದೂವರೆ ಕೋಟಿಯ ತಿಮಿಂಗಲ ವಾಂತಿ ವಶಪಡಿಸಿಕೊಂಡಿದ್ದರು.
ಈ ಮಾಫಿಯಾದ ಕಿಂಗ್ ಪಿನ್ ಗಣಪತಿ ವಿಚಾರಣೆ ಮಾಡಿದಾಗ 10 ಕೋಟಿ ಮೌಲ್ಯದ ತಿಮಿಂಗಿಲ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಗಣಪತಿ ಎಂಬುವವರ ಬಳಿ ಜಪ್ತಿ ಮಾಡಲಾಗಿದೆ ಎನ್ನಲಾಗಿದೆ. ಹೊಸಪೇಟೆ ಪಟ್ಟಣ ಪೊಲೀಸರು ಇದನ್ನು ಜಪ್ತಿ ಮಾಡಿದ್ದಾರೆ. ಪೊಲೀಸರು ಹೆಚ್ಚಿನ ತನಿಖೆ ಮಾಡುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ