ಭದ್ರಾವತಿ: ನಾಲ್ಕು ದಶಕದ ಬಳಿಕ ಹಿಂದೂ ಧರ್ಮಕ್ಕೆ ವಾಪಸ್ಸಾದ ಕುಟುಂಬ

ಶಿವಮೊಗ್ಗ: ಭದ್ರಾವತಿ ತಾಲೂಕು ಅಂತರಗಂಗೆ ಗ್ರಾಮದ ನಿವಾಸಿಗಳಾದ ಜಯಶೀಲನ್ ಮತ್ತು ಜಯಮ್ಮ ಎಂಬವರು ತಮ್ಮ ಕುಟುಂಬದ ಸಮೇತ ಕ್ರೈಸ್ತ ಧರ್ಮದಿಂದ ಹಿಂದೂ‌ ಧರ್ಮಕ್ಕೆ ಮರಳಿ ಬಂದಿದ್ದಾರೆ.
ಜಯಶೀಲನ್ ಅವರ ಕುಟುಂಬ ಮೂಲತಃ ಹಿಂದೂ ಧರ್ಮದವರೇ ಆಗಿದ್ದರಂತೆ. ಇವರ ತಂದೆ ಏಳುಮಲೈ 1980ರಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದರಂತೆ. ನಂತರ ಕುಟುಂಬದವರು ಯಾರೂ ಸಹ ಚರ್ಚ್​ಗೆ ಹೋಗದೆ, ಹಿಂದೂ ಧರ್ಮದ ಆಚರಣೆಯನ್ನೇ ಅನುಸರಿಸುತ್ತಿದ್ದರು ಎಂದು ಹೇಳಲಾಗಿದೆ.
ಭದ್ರಾವತಿಯ ವಿಶ್ವ ಹಿಂದೂ ಪರಿಷತ್​, ಬಜರಂಗದಳದ ಮುಖಂಡರು ಜಯಶೀಲನ್ ಹಾಗೂ ಜಯಮ್ಮ ಅವರ ಕುಟುಂಬದವರೊಡನೆ ಮಾತನಾಡಿ, ಅವರ ಕುಟುಂಬ ಸದಸ್ಯರಾದ ಪ್ರಭಾಕರನ್, ಅವರ ಪತ್ನಿ ಲಲಿತಾ ಪ್ರಭಾಕರನ್ ಹಾಗು ಮಕ್ಕಳಾದ ಭರತ್ ಕುಮಾರ್, ಭಾವನಾ, ದ್ವಿತೀಯ ಪುತ್ರ ಪ್ರಕಾಶ್​ ಮತ್ತು ಶ್ವೇತಾ ಪ್ರಕಾಶ್ ಹಾಗು ಪುತ್ರಿ ಪೃಥ್ವಿ ಅವರು ಇಂದು ಪುನಃ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ ಎಂದು ಈ ಟಿವಿ ಭಾರತ ಕನ್ನಡ.ಕಾಮ್‌ ವರದಿ ಮಾಡಿದೆ.
ಘರ್ ವಾಪಸಿ ಕಾರ್ಯಕ್ರಮವು ಭದ್ರಾವತಿ ಜನ್ನಾಪುರದ ಸಾರ್ವಜನಿಕ ರಾಮಭಜನಾ ಮಂದಿರದಲ್ಲಿ ನಡೆಯಿತು. ಕೃಷ್ಣಮೂರ್ತಿ ಸೋಮಯಾಜಿ, ಅರಕೆರೆಯ ಕರಿಸಿದ್ದೇಶ್ವರ ಸ್ವಾಮೀಜಿ ಸಮ್ಮುಖದಲ್ಲಿ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ. ಈ ವೇಳೆ ವಿಶ್ವಹಿಂದೂ ಪರಿಷತ್ತಿನ ಪ್ರಮುಖರಾದ ಹಾ. ರಾಮಪ್ಪ, ಡಿ. ಆರ್ ಶಿವಕುಮಾರ್, ವೈ. ಎಸ್, ರಾಮಮೂರ್ತಿ, ಎಸ್. ನಾರಾಯಣ್, ಪಿ. ಮಂಜುನಾಥ್ ರಾವ್,ಮೊದಲಾದವರಿದ್ದರು ಎಂದು ವರದಿ ತಿಳಿಸಿದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement