ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಅಬ್ದುಲ್ ನಜೀರ್

ಮಂಗಳೂರು: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಇಂದು, ಸೋಮವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಹೈದರಾಬಾದ್‍ನಿಂದ ಮಂಗಳೂರಿಗೆ ಕುಟುಂಬ ಸಮೇತರಾಗಿ ವಿಮಾನದಲ್ಲಿ ಬಂದ ನ್ಯಾಯಮೂರ್ತಿಗಳು ಕಾರಿನಲ್ಲಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಆಶ್ಲೇಷ ಬಲಿ ಹಾಗೂ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಆಶ್ಲೇಷ ಪೂಜೆ ಬಳಿಕ ದೇವಸ್ಥಾನದ ಆಡಳಿತ ಮಂಡಳಿಯಿಂದ ನ್ಯಾಯಮೂರ್ತಿಗಳಿಗೆ ಗೌರವ ಸಲ್ಲಿಸಲಾಯಿತು.
ಅಬ್ದುಲ್‌ ನಜೀರ್‌ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಮೂಡುಬಿದಿರೆ ಕಡಲಕೆರೆ ಸಂತ ಇಗ್ನೇಶಿಯಸ್ ಹಿರಿಯ ಪ್ರಾಥಮಿಕ ಶಾಲೆ, ಜೈನ್ ಹೈಸ್ಕೂಲ್ ಮತ್ತು ಶ್ರೀ ಮಹಾವೀರ ಕಾಲೇಜಿನಲ್ಲಿ ಬಿಕಾಂ ಪದವಿ ಹಾಗೂ ಮುಂದೆ ಮಂಗಳೂರಿನ ಎಸ್‍ಡಿಎಂ ಕಾಲೇಜಿನಲ್ಲಿ ಕಾನೂನು ಅಧ್ಯಯನ ಮಾಡಿದ್ದಾರೆ.

5 / 5. 1

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ನಿಮ್ಮ ಕಾಮೆಂಟ್ ಬರೆಯಿರಿ

advertisement