ಆಮ್‌ ಆದ್ಮಿ ಪಕ್ಷದ ಧಾರವಾಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಂತೋಷ ನರಗುಂದ ರಾಜೀನಾಮೆ

ಹುಬ್ಬಳ್ಳಿ: ಆಮ್‌ ಆದ್ಮಿ ಪಕ್ಷದ ಧಾರವಾಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಂತೋಷ ನರಗುಂದ ಅವರು ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಜೊತೆ ಈ ಕುರಿತು ಮಾತನಾಡಿದ್ದು, ಇಂದಿನಿಂದ ಆಮ್ ಆದ್ಮಿ ಪಕ್ಷದ ಧಾರವಾಡ ಜಿಲ್ಲಾಧ್ಯಕ್ಷ ಸ್ಥಾನದ ಜವಾಬ್ದಾರಿ ಬಿಟ್ಟುಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ.
ಕಳೆದೆರಡು ವರ್ಷದ ನನ್ನ ಕಾರ್ಯಕಾಲದಲ್ಲಿ ಪಕ್ಷದ ಎಲ್ಲರೂ ನೀಡಿದ ಪ್ರೀತಿ, ವಿಶ್ವಾಸ ಮತ್ತು ಪ್ರೋತ್ಸಾಹಕ್ಕೆ ನಾನು ಆಭಾರಿಯಾಗಿದ್ದೇನೆ. ಮುಂದೆಯೂ ಸಹ ಪಾರದರ್ಶಕತೆ, ಸಾರ್ವಜನಿಕ ಹೊಣೆಗಾರಿಕೆ, ಜನರ ಸಹಭಾಗಿತ್ವ ಮತ್ತು ನೈತಿಕ ನಾಯಕತ್ವದ ಅಭಿವೃದ್ಧಿಯಿಂದ ಉತ್ತಮ ಆಡಳಿತ ತರುವ ನನ್ನ ಪ್ರಯತ್ನಗಳನ್ನು ಜನರಿಗೆ ಮುಟ್ಟಿಸುವಲ್ಲಿ ಸಹಕಾರ ಮತ್ತು ಬೆಂಬಲ ಇದ್ದೇ ಇರುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.

5 / 5. 2

ಪ್ರಮುಖ ಸುದ್ದಿ :-   ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ, ಸುಳ್ಳು ಪ್ರಕರಣ ದಾಖಲು : ಬಂಧನದ ನಂತರ ರೇವಣ್ಣ ಮೊದಲ ಪ್ರತಿಕ್ರಿಯೆ

ನಿಮ್ಮ ಕಾಮೆಂಟ್ ಬರೆಯಿರಿ

advertisement