ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ : ಕರ್ನಾಟಕದ ಕೆ.ಎಲ್‌.ರಾಹುಲ್ ಭಾರತದ ತಂಡದ ನಾಯಕ

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಗೆ ಭಾರತದ ತಂಡ ಪ್ರಕಟಿಸಲಾಗಿದ್ದು, ಕನ್ನಡಿಗ ಕೆ.ಎಲ್. ರಾಹುಲ್ ಅವರನ್ನು ತಂಡದ ನಾಯಕನನ್ನಾಗಿ ಮಾಡಲಾಗಿದೆ.
ಬಿಸಿಸಿಐ ಏಕದಿನ ಪಂದ್ಯಾವಳಿಗೆ ತಂಡವನ್ನು ಶುಕ್ರವಾರ ಪ್ರಕಟಿಸಿದ್ದು, ರೋಹಿತ್ ಶರ್ಮಾ ಗಾಯದ ಕಾರಣದಿಂದ ತಂಡದಲ್ಲಿಲ್ಲದ ಕಾರಣ ಉಪನಾಯಕರಾಗಿದ್ದ ಕರ್ನಾಟಕದ ಕೆ.ಎಲ್‌.ರಾಹುಲ್ ಅವರನ್ನು ಏಕದಿನ ಸರಣಿಗೆ ನಾಯಕರನ್ನಾಗಿ ಹೆಸರಿಸಿದೆ.

ಭಾರತದ ತಂಡ:
ಕೆ.ಎಲ್. ರಾಹುಲ್ (ನಾಯಕ),ಜೆ. ಬುಮ್ರಾ (ಉಪನಾಯಕ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ ( ವಿಕೆಟ್ ಕೀಪರ್), ವೈ. ಚಾಹಲ್, ಆರ್. ಅಶ್ವಿನ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್
ಜನವರಿ 19 ರಂದು ಮೊದಲ ಏಕದಿನ,ಜನವರಿ 21 ರಂದು,ದ್ವಿತೀಯ ಏಕದಿನ ಮತ್ತು ಜನವರಿ 23 ರಂದು ಮೂರನೇ ಏಕದಿನ ಪಂದ್ಯಗಳು ನಡೆಯಲಿವೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement