ಕಾರು- ಬಸ್ ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ ಮೂವರು ಮೃತಪಟ್ಟ ಘಟನೆ ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿ ಕೆಂಪನಕೊಪ್ಪಲು ಗೇಟ್ ಸ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ಮೂಲದ ಸುದೀಪ್(35), ಶ್ರೀಜಾ(30) ಹಾಗೂ ಸಂಗಮ್ಮ(55) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೊಬ್ಬ 18 ವರ್ಷದ ಯುವತಿ ತೀವ್ರವಾಗಿ ಗಾಯಗೊಂಡಿದ್ದು, ಬಿ.ಜಿ.ನಗರದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಸ್‌ನಲ್ಲಿದ್ದ ಚಾಲಕ ಸೇರಿದಂತೆ ನಾಲ್ವರಿಗೆ ಗಾಯಗಳಾಗಿವೆ.
ಮೃತರಾದ ಸುದೀಪ್ ಹಾಗೂ ಶ್ರೀಜಾ ಡಿ.11ರಂದು ಮದುವೆಯಾಗಿದ್ದರು. ಮದುವೆಯಾಗಿ ಒಂದು ತಿಂಗಳು ಕಳೆಯುವುದರೊಳಗೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಬ್ಯಾಂಕ್‌ವೊಂದರಲ್ಲಿ ಮ್ಯಾನೇಜರ್ ಆಗಿದ್ದ ಸುದೀಪ ಬೆಂಗಳೂರಿನಲ್ಲಿಯೇ ನೆಲೆಸಿದ್ದರು. ಕಾರಿನಲ್ಲಿದ್ದವರು ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಅಮಾವಾಸ್ಯೆಯ ಪೂಜೆ ಮುಗಿಸಿ ಮೈಸೂರು ಮಾರ್ಗವಾಗಿ ತೆರಳುವಾಗ ಜಾರನಕಟ್ಟೆ ತಿರುವಿನಲ್ಲಿರುವ ಕೆಂಪನಕೊಪ್ಪಲು ಗೇಟ್ ಬಳಿ ಎದುರಾದ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ.ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಕಪಾಳಕ್ಕೆ ಹೊಡೆದ ಡಿಸಿಎಂ ಡಿ.ಕೆ.ಶಿವಕುಮಾರ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement