ಕರ್ನಾಟಕದಲ್ಲಿ ಭಾನುವಾರವೂ ಕೊರೊನಾ ಹೆಚ್ಚಳ..1187 ಜನರಿಗೆ ಹೊಸದಾಗಿ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು, ಭಾನುವಾರ ಕೂಡ ಕೊರೊನಾ ದೈನಂದಿನ ಸೋಂಕಿನಲ್ಲಿ ಹೆಚ್ಚಳವಾಗಿದ್ದು ಒಂದೇ ದಿನ 1187 ಜನರಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 30,09,557 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದೇವೇಳೆ 6 ಜನ ಸೋಂಕಿತರು ಮೃತಪಟ್ಟಿದ್ದು, ಮೃತಪಟ್ಟವರ ಸಂಖ್ಯೆ 38,346ಕ್ಕೆ ಏರಿದೆ. 275 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 29,60,890 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 10,292 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ 1.08%ರಷ್ಟಿದೆ.
ರಾಜಧಾನಿ ಬೆಂಗಳೂರಿನಲ್ಲಿ 923 ಜನರಿಗೆ ಕೊರೊನಾ ದೃಢಪಟ್ಟಿದೆ. ಮೂವರು ಮೃತಪಟ್ಟಿದ್ದಾರೆ. 125 ಜನ ಗುಣಮುಖರಾಗಿದ್ದಾರೆ. 8671 ಸಕ್ರಿಯ ಪ್ರಕರಣಗಳೀವೆ.
ಬಾಗಲಕೋಟೆ, ಬೀದರ, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣಗಳು ವರದಿಯಾಗಿಲ್ಲ.

0 / 5. 0

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

ನಿಮ್ಮ ಕಾಮೆಂಟ್ ಬರೆಯಿರಿ

advertisement