ಸರ್ಕಸ್‌ ಕಂಪನಿಗೆ ಮಾರಲು ಮಠದ ಆನೆ ಅಪಹರಿಸಲು ಯತ್ನ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧವೂ ಆರೋಪ..!

ತುಮಕೂರು: ಕರಿಬಸವೇಶ್ವರ ಮಠದ ಆನೆಯನ್ನು ಅಪಹರಣ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಖದೀಮರ ಗುಂಪೊಂದು ಲಕ್ಷ್ಮೀ ಎಂಬ ಹೆಣ್ಣಾನೆಯನ್ನು ಅಪಹರಿಸಿ ಗುಜರಾತಿಗೆ ಸಾಗಿಸಲು ಯತ್ನಿಸಿದೆ. ಆನೆಗೆ ಚಿಕಿತ್ಸೆ ಕೊಡಿಸಬೇಕು ಎಂದು ಸಂಚು ರೂಪಿಸಿ ಅಪಹರಣಕ್ಕೆ ಮುಂದಾಗಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಸಹ ಈ ಅಪಹರಣದ ಸಂಚಿಗೆ ಸಹಕಾರಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಈ ಆನೆ ಹೊಟ್ಟೆಯೊಳಗೆ ಗಡ್ಡೆ ಬೆಳೆದಿದೆ. ಬನ್ನೇರುಘಟ್ಟದಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಲಾರಿಯಲ್ಲಿ ಹತ್ತಿಸಿಕೊಂಡು ಹೋಗಿದ್ದಾರೆ. ದಾಬಾಸ್ ಪೇಟೆ ಬಳಿ ಮಠದ ಆನೆಯ ಮಾವುತನ ಮೇಲೆ ಹಲ್ಲೆ ನಡೆಸಿ ಆತನನ್ನು ಕೆಳಗಿಳಿಸಿ ಆನೆಯನ್ನು ಅಪಹರಿಸಲು ಯತ್ನಿಸಿದ್ದಾರೆ. ಬನ್ನೇರುಘಟ್ಟಕ್ಕೆ ಕರೆದುಕೊಂಡು ಹೋಗುವ ಬದಲು ಕುಣಿಗಲ್ ತಾಲೂಕಿನ ನಾರನಹಳ್ಳಿ ಹಳ್ಳಿಯೊಂದರಲ್ಲಿ ಆನೆಯನ್ನು ಬಚ್ಚಿಡಲಾಗಿತ್ತು. ಈ ವೇಳೆ ಆನೆ ಮೇಲೆಯೂ ಜೆಸಿಬಿಯಿಂದ ಹಲ್ಲೆ ಮಾಡಲಾಗಿತ್ತು ಎಂದು ಮಠದ ಸಿಬ್ಬಂದಿ ಆರೋಪಿಸುತ್ತಿದ್ದಾರೆ.
ಆರೋಪಿಗಳು ಗುಜರಾತ್ ಮೂಲದ ಸರ್ಕಸ್ ಕಂಪನಿಗೆ ಆನೆಯನ್ನು ಮಾರಲು ಯತ್ನಿಸಿದ್ದಾರೆ. ಸದ್ಯ ಮಠದ ಆಡಳಿತ ಮಂಡಳಿ ತುಮಕೂರು ನಗರ ಠಾಣೆಗೆ ದೂರು ನೀಡಿದ್ದು, ವಿಚಾರಣೆ ಬಳಿಕ ಘಟನೆಯ ಸತಾಸತ್ಯತೆ ಏನು ಎಂಬುದು ಹೊರಬೀಳಲಿದೆ.

ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement