ಮಹತ್ವದ ಸುದ್ದಿ…ಕೋವಿಡ್ ಹೆಚ್ಚಳ : ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ, ಬೆಂಗಳೂರಿನಲ್ಲಿ 2 ವಾರ ಶಾಲೆ-ಕಾಲೇಜ್ ಬಂದ್

ಬೆಂಗಳೂರು: ಕರ್ನಾಟಕದಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಒಂದೇ ಸಮನೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವೀಕೆಂಡ್‌ ಕರ್ಫ್ಯೂ ಜಾರಿಗೊಳಿಸಿದೆ. ಅಲ್ಲದೇ ಬೆಂಗಳೂರಲ್ಲಿ ಮಾತ್ರ ಶಾಲೆಗಳನ್ನ ಎರಡು ವಾರ ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ.
ಇಂದು(ಮಂಗಳವಾರ) ತಜ್ಞರ ಜೊತೆಗಿನ ಸಭೆ ಬಳಿಕ ಸಚಿವರಾದ ಅಶೋಕ್, ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ (weekend Curfew) ಇರಲಿದೆ, ಜನವರಿ 17 ರವರೆಗೆ ಜಾರಿಯಲ್ಲಿರಲಿದೆ ಎಂದು ಸ್ಪಷ್ಟಪಡಿಸಿದರು.‌
ಜೊತೆಗೆ ಈಗಾಗಲೇ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂವನ್ನು ಇನ್ನೂ ಎರಡು ವಾರಗಳ ಕಾಲ ವಿಸ್ತರಣೆ ಮಾಡಿದೆ.
ಇದೇ ವಾರದಿಂದಲೇ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ಬರಲಿದೆ. ಜತೆಗೆ ನೈಟ್ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ. ಇದರ ಜತೆಗೆ ಹಲವು ನಿರ್ಬಂಧಗಳನ್ನೂ ರಾಜ್ಯ ಸರಕಾರ ಜಾರಿಗೆ ತರುತ್ತಿದೆ.

ಚಿತ್ರಮಂದಿರ, ಮಾಲ್‌ಗಳಿಗೆ ಶೇ. 50ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ಒಳಾಂಗಣ ಮದುವೆಗಳಲ್ಲಿ ಗರಿಷ್ಠ 100 ಜನ ಮತ್ತು ಹೊರಾಂಗಣ ಮದುವೆಗಳಲ್ಲಿ ಗರಿಷ್ಠ 200 ಜನರು ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.
ಕರ್ನಾಟಕದಾದ್ಯಂತ ಎರಡು ವಾರ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಇನ್ನು ಬೆಂಗಳೂರಲ್ಲಿ ಮಾತ್ರ ಎರಡು ವಾರ ಶಾಲೆ ಬಂದ್ ಮಾಡಲು ತೀರ್ಮಾನಿಸಲಾಗಿದೆ ಎಂದರು.
ಬೆಂಗಳೂರಿನಲ್ಲಿ ಮುಂದಿನ ಎರಡು ವಾರಗಳು (ಜನವರಿ 6ರಿಂದ) 10, 11 ಮತ್ತು 12ನೇ ತರಗತಿ, ಮೆಡಿಕಲ್‌, ಪ್ಯಾರಾ ಮೆಡಿಕಲ್‌ ಹಾಗೂ ನರ್ಸಿಂಗ್‌ ಹೊರತು ಪಡಿಸಿ ಉಳಿದ ಎಲ್ಲ ತರಗತಿಗಳನ್ನೂ ಬಂದ್ ಮಾಡಿ ಆನ್‌ಲೈನ್‌ ಮೂಲಕ ನಡೆಸಲು ನಿರ್ಧರಿಸಲಾಗಿದೆ. ಶಾಲಾ ಕಾಲೇಜುಗಳು ಆನ್​ಲೈನ್ ವಿಧಾನದಲ್ಲಿ ನಡೆಯುತ್ತದೆ.
6ನೇ ತಾರೀಖಿನಿಂದ ಜಾರಿಯಾಗುವಂತೆ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಡ್‌ ಕರ್ಫ್ಯೂ ಇರುತ್ತದೆ. ಆಹಾರ ವಸ್ತು, ಹೊಟೆಲ್​ಗಳಲ್ಲಿ ಪಾರ್ಸೆಲ್​, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಂತರ ಸಚಿವರಾದ ಆರ್. ಅಶೋಕ್‌, ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ನಾವು ತೆಗೆದುಕೊಂಡ ತೀರ್ಮಾನಗಳನ್ನು ವೈಜ್ಞಾನಿವಾಗಿ ವಿಶ್ವ ಆರೋಗ್ಯ ಸಂಸ್ಥೆ, ಕೇಂದ್ರ ಸರ್ಕಾರ, ಮಹಾರಾಷ್ಟ್ರ, ಕೇರಳ, ತಮಿಳುನಾಡಿನಲ್ಲಿ ಜಾರಿಗೆ ತಂದಿರುವ ತೀರ್ಮಾನಗಳನ್ನು ಪರಾಮರ್ಶಿಸಿದ್ದೇವೆ. ಓಮಿಕ್ರಾನ್ ಸೋಂಕು ಡೆಲ್ಟಾಕ್ಕಿಂತ 5 ಪಟ್ಟು ಜಾಸ್ತಿ ಆಗ್ತಿದೆ ಅಂತ ತಜ್ಞರು ವರದಿ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಪಸ್ತುತ 3048 ಮಂದಿಗೆ ಸೋಂಕು ಬಂದಿದೆ. 147 ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ನಮ್ಮ ರಾಜ್ಯದಲ್ಲಿ ಪಾಸಿಟಿವ್ ಪ್ರಕರಣ ಶೇ 3ಕ್ಕಿಂತ ಹೆಚ್ಚಾಗಿದೆ. 20ರಿಂದ 50 ವರ್ಷದವರಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ ಎಂದು ಆರ್. ಅಶೋಕ್ ಹೇಳಿದರು..

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

ನಾವು ಕ್ರಮ ತೆಗೆದುಕೊಳ್ಳುತ್ತಿರುವ ಕಾರಣದಿಂದ ಯಾರೂ ಆತಂಕಕ್ಕೆ ಒಳಗಾಗಬಾರದು. ಮೊದಲ ಎರಡು ಅಲೆಗಳಿಗೆ ಹೋಲಿಸಿದರೆ ಇದು ಅಷ್ಟು ಭೀಕರವಾಗಿಲ್ಲ. ವೆಂಟಿಲೇಟರ್ ಮತ್ತು ಆಕ್ಸಿಜನ್ ಅವಶ್ಯಕತೆ ಬಹಳ ಕಡಿಮೆಯಿದೆ. ಅತಿಹೆಚ್ಚು ಸೋಂಕಿತರು ಆದಾಗ ಆಸ್ಪತ್ರೆಗಳ ಮೇಲೆ ಒತ್ತಡ ಬೀರಿ ಪರಿಸ್ಥಿತಿ ನಮ್ಮ ಕೈಮೀರಿ ಹೋಗದಂತೆ ತಡೆಯಲು ಮುಂದಾಲೋಚನೆ ಹಾಗೂ ಮುನ್ನೆಚ್ಚರಿಕೆಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಜನರು ಕಡ್ಡಾಯವಾಗಿ ಮಾಸ್ಕ್​ಗಳನ್ನು ಧರಿಸಬೇಕು. ಇಲ್ಲದಿದ್ದರೆ ಫೈನ್ ಬೀಳಲಿದೆ ಎಂದು ಹೇಳಿದ್ದಾರೆ.
ಎಲ್ಲ ರೀತಿಯ ಸಮಾರಂಭಗಳಿಗೆ ಕಡಿವಾಣ ಹಾಕಲಾಗಿದೆ. ಮುಂದಿನ 2 ವಾರಗಳು ಯಾರೂ ಸಮಾರಂಭಗಳಲ್ಲಿ ಪಾಲ್ಗೊಳ್ಳಬಾರದು. ಪ್ರತಿಯೊಬ್ಬ ವ್ಯಕ್ತಿ, ಸಂಘ-ಸಂಸ್ಥೆಯ ಪದಾಧಿಕಾರಿಗಳು ಸಹಕರಿಸಬೇಕು. ವಿದೇಶಗಳಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡುತ್ತೇವೆ. ಮನೆಗಳಿಗೆ ಕಳಿಸುವುದಿಲ್ಲ. ಬಜೆಟ್ ಹೊಟೆಲ್​ಗಳಲ್ಲಿ ಸರ್ಕಾರವೇ ಪಾವತಿಸುತ್ತದೆ. 4 ಸ್ಟಾರ್, 5 ಸ್ಟಾರ್​ ಹೊಟೆಲ್​ಗಳಲ್ಲಿ ಕ್ವಾರಂಟೈನ್ ಆಗುವವರು ಅವರೇ ಹಣ ಪಾವತಿಸಬೇಕಾಗುತ್ತದೆ ಎಂದು ಸುಧಾಕರ್ ಮಾಹಿತಿ ನೀಡಿದರು.

ಬೆಂಗಳೂರಿಗೊಂದು, ಇತರ ಪ್ರದೇಶಗಳಿಗೆ ನಿಯಮ ಜಾರಿಗೆ ನಿರ್ಧಾರ
ಕಳೆದ 3 ದಿನಗಳಿಂದ ಕೊವಿಡ್ ಎರಡು ಮೂರು ದಿನಗಳಲ್ಲಿ ಎರಡು ಪಟ್ಟು ಹೆಚ್ಚಾಗುತ್ತಿದೆ. ಐದಾರು ದಿನಗಳಲ್ಲಿ 10 ಸಾವಿರ ದಾಟುವ ಅಪಾಯ ಕಂಡುಬರುತ್ತಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ 10 ಸಾವಿರ ದಾಟಿದೆ ಎಂದು ಹೇಳಿದ್ದಾರೆ. ಶೇ 80ರಿಂದ 85ರಷ್ಟು ಸೋಂಕು ಮೆಟ್ರೊ ನಗರಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ದೇಶದೆಲ್ಲೆಡೆ ಇದೇ ಪರಿಸ್ಥಿತಿ ವರದಿಯಾಗಿದೆ. ಅಮೆರಿಕದಲ್ಲಿಯೂ ಪ್ರಸ್ತುತ 5 ಕೋಟಿಗೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಪರಿಸ್ಥಿತಿ ನಿರ್ವಹಿಸಲು ಬೆಂಗಳೂರಿಗೆ ಒಂದು, ರಾಜ್ಯದ ಇತರೆಡೆಗೆ ಮತ್ತೊಂದು ನಿಯಮಾವಳಿ ರೂಪಿಸಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುತ್ತದೆ.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

*ಬೆಂಗಳೂರಿನಲ್ಲಿ ಮಾತ್ರ ಮುಂದಿನ ಎರಡು ವಾರಗಳು (ಜನವರಿ 6ರಿಂದ) 10, 11 ಮತ್ತು 12ನೇ ತರಗತಿ, ಮೆಡಿಕಲ್‌, ಪ್ಯಾರಾ ಮೆಡಿಕಲ್‌ ಹಾಗೂ ನರ್ಸಿಂಗ್‌ ಹೊರತು ಪಡಿಸಿ ಉಳಿದೆಲ್ಲ ಆಫ್ಲೈನ್‌ ತರಗತಿಗಳು ಬಂದ್ , ಶಾಲಾ ಕಾಲೇಜುಗಳು ಆನ್​ಲೈನ್ ವಿಧಾನದಲ್ಲಿ ನಡೆಯುತ್ತದೆ.

* ಯಾವುದೇ ಸಭೆ-ಸಮಾರಂಭಗಳು, ಪಾದಯಾತ್ರೆಗಳು, ಪ್ರತಿಭಟನಾ ಯಾತ್ರೆಗಳು ಬಂದ್‌

* ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳ ಒಟ್ಟು ಸಾಮರ್ಥ್ಯದ ಶೇ.50% ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ. ಾಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ

* ದೇವಸ್ಥಾನಕ್ಕೆ 50 ಜನಕ್ಕೆ ಮಾತ್ರ ಅವಕಾಶ*, ಕೇವಲ ಪೂಜೆಗಷ್ಟೇ ಅವಕಾಶ, ಜಾತ್ರೆ ನಡೆಸುವಂತಿಲ್ಲ.

* ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ.

* ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು.

* ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್​ಟಿಪಿಸಿಆರ್ ಕಡ್ಡಾಯ.
*ವೀಕೆಂಡ್‌ ಕರ್ಫ್ಯೂ ಸಮಯದಲ್ಲಿ ಅಗತ್ಯಸೇವೆಗಳಿಗೆ ಮಾತ್ರ ಅವಕಾಶ, ಹೋಟೆಲ್‌ಗಳಲ್ಲಿ ಪಾರ್ಸೆಲ್‌ ಸೇವೆಗಳಿಗೆ ಅವಕಾಶ, ಹೋಂ ಡೆಲಿವರಿಗೆ ಅವಕಾಶ

*ವೀಕೆಂಡ್‌ ಕರ್ಫ್ಯೂ ಸಮಯದಲ್ಲಿ ಆಹಾರ, ತರಕಾರಿ, ಹಣ್ಣು, ಮಾಂಸ, ಮೀನು, ಡೈರಿ, ಹಾಲಿನ ಬೂತ್ ತೆರೆಯಲು ಅನುಮತಿ

*ವೀಕೆಂಡ್‌ ಕರ್ಫ್ಯೂ ಸಮಯದಲ್ಲಿ ತುರ್ತು ಸಂದರ್ಭದಲ್ಲಿ ಜನರು ತೆರಳಲು ಅವಕಾಶ

* ಮೆಟ್ರೋ, ಬಸ್‍ಗಳಿಗೂ ನಿರ್ಬಂಧ ವಿಧಿಸಲಾಗಿದ್ದು, ಸೀಟು ಇರುವಷ್ಟೇ ಪ್ರಯಣಿಕರಿಗೆ ಅವಕಾಶ ನೀಡಲು ಮುಂದಾಗಿದ್ದು, ಬಿಎಂಟಿಸಿ, ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ

* ಸರ್ಕಾರಿ ಕಚೇರಿಗಳು, ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುತ್ತದೆ.

* ವಿದೇಶಿ ಪ್ರಯಾಣಿಕರ ಟ್ರ್ಯಾಕಿಂಗ್-ಟ್ರೇಸಿಂಗ್ ಬಲಪಡಿಸಲು ತೀರ್ಮಾನ

* ಶಾಲಾ ಕಾಲೇಜು ರಜೆ ಬೆಂಗಳೂರಿಗೆ ಮಾತ್ರ ಅನ್ವಯ ಆಗುತ್ತದೆ. ಆದರೆ, ಉಳಿದ ನಿಯಮಗಳು ಇಡೀ ರಾಜ್ಯಕ್ಕೆ ಅನ್ವಯಿಸುತ್ತದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement