ಪ್ರಧಾನಿ ಮೋದಿ ರಸ್ತೆ ಮಾರ್ಗವಾಗಿ ಬರುತ್ತಿದ್ದಾರೆಂದು ನಮಗೆ ಮನವರಿಕೆ ಮಾಡಿದ್ದರೆ ರಸ್ತೆ ಖಾಲಿ ಮಾಡುತ್ತಿದ್ದೆವು: ರೈತ ಮುಖಂಡ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲನ್ನು ತನ್ನ ಕಾರ್ಯಕರ್ತರು ತಡೆದಿರುವುದನ್ನು ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಒಪ್ಪಿಕೊಂಡಿದೆ.
ಈ ಕುರಿತು ಟೈಮ್ಸ್ ನೌ ಜೊತೆ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖ್ಯಸ್ಥ ಸುರ್ಜಿತ್ ಸಿಂಗ್ ಫೂಲ್ – ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕುರಿತು ಸರ್ಕಾರವು ಯಾವುದೇ ಸಮಿತಿ ರಚಿಸದ ಕಾರಣ 12-13 ರೈತ ಸಂಘಟನೆಗಳು ಪ್ರತಿಭಟಿಸಲು ನಿರ್ಧರಿಸಿತ್ತು ಎಂದು ಅವರು ಹೇಳಿದ್ದಾರೆ, ಆದಾಗ್ಯೂ, ಪ್ರಧಾನಿ ಮೋದಿ ಸಮಾವೇಶ ನಡೆಸಲು ಉದ್ದೇಶಿಸಿರುವ ಸ್ಥಳದಿಂದ ಎಂಟು ಕಿಮೀ ದೂರದಲ್ಲಿ ರೈತರ ಗುಂಪು ಪ್ರತಿಭಟಿಸುತ್ತಿತ್ತು ಮತ್ತು ಇದು ಕೊನೆಯ ಕ್ಷಣದಲ್ಲಿ ಪ್ರಧಾನಿಯವರ ಬೆಂಗಾವಲು ಮಾರ್ಗವನ್ನು ಬದಲಾಯಿಸಿದ್ದು ಈ ವಿದ್ಯಮಾನಕ್ಕೆ ಕಾರಣವಾಯಿತು ಎಂದು ಅವರು ಹೇಳಿದರು.
ಪಂಜಾಬ್‌ನ 12 ಅಥವಾ 13 ಸಂಘಟನೆಗಳು ಪ್ರತಿಭಟನೆಗೆ ನಿರ್ಧರಿಸಿದ್ದವು. ಪ್ರತಿಭಟನೆಯ ಹಿಂದಿನ ಕಾರಣವೆಂದರೆ ಸರ್ಕಾರದ ಭರವಸೆಯ ಹೊರತಾಗಿಯೂ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕುರಿತು ಯಾವುದೇ ಸಮಿತಿಯನ್ನು ರಚಿಸದಿರುವುದು, ಮೂರು ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಯಾವುದೇ ಪರಿಹಾರ ನೀಡದಿರುವುದು ಹಾಗೂ ಗೃಹ ಖಾತೆ ರಾಜ್ಯ ಸಚಿವರ (ಅವರ ಮಗ ಲಖೀಂಪುರ ಖೇರಿ ಪ್ರಕರಣದಲ್ಲಿ ಪ್ರಮುಖ ಆರೋಪಿ) ಯಾವುದೇ ಕ್ರಮ ಕೈಗೊಳ್ಳದಿರುವ ಕುರಿತು ಪ್ರತಿಭಟನೆ ನಡೆಯುತ್ತಿತ್ತು ಎಂದು ಅವರು ಟೈಮ್ಸ್ ನೌಗೆ ತಿಳಿಸಿದ್ದಾರೆ.
ಮಧ್ಯಾಹ್ನ 2 ಗಂಟೆಗೆ, ಪ್ರಧಾನಿ ಬಟಿಂಡಾದಿಂದ ರಸ್ತೆ ಮಾರ್ಗವಾಗಿ ಬರುತ್ತಾರೆ ಎಂದು ನಮಗೆ ತಿಳಿಯಿತು. ಆದರೆ ಸಮಾವೇಶ ನಡೆಯುವ ಸ್ಥಳದ ಬಳಿ ದೊಡ್ಡ ಹೆಲಿಪ್ಯಾಡ್ ಇತ್ತು. ಮತ್ತು ಪ್ರಧಾನಿಯವರು ರಸ್ತೆಯ ಮೂಲಕ ಬರುತ್ತಿದ್ದಾರೆ ಎಂದು ಪೊಲೀಸರು ಹೇಳಿದರು. ಹಾಗಾಗಿ ಪೊಲೀಸರು ಪ್ರಧಾನಿಯವರು ರಸ್ತೆ ಮೂಲಕ ಬರುತ್ತಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ನಾವು ಭಾವಿಸಿದೆವು. ಅವರು ವಿಮಾನದಲ್ಲಿ ಬರುತ್ತಾರೆಂದು ನಿಗದಿಯಾಗಿತ್ತು. ಹೀಗಾಗಿ ನಾವು ರಸ್ತೆಯನ್ನು ತೆರವುಗೊಳಿಸುವುದಿಲ್ಲ, ನೀವು ಸುಳ್ಳು ಹೇಳುತ್ತಿದ್ದೀರಿ ಎಂದು ನಾವು ಪೊಲೀಸರಿಗೆ ಹೇಳಿದೆವು ಎಂದು  ಸುರ್ಜಿತ್ ಸಿಂಗ್ ಫೂಲ್ ಹೇಳಿದರು.

ಪ್ರಮುಖ ಸುದ್ದಿ :-   ಗೂಢಲಿಪಿ ಬಹಿರಂಗಗೊಳಿಸಲು ಒತ್ತಾಯಿಸಿದರೆ ಭಾರತದಿಂದ ನಿರ್ಗಮಿಸಬೇಕಾಗ್ತದೆ ಎಂದ ವಾಟ್ಸಾಪ್

ಪ್ರಧಾನಿ ರಸ್ತೆಯಲ್ಲಿ ಬರುತ್ತಾರೆಂದು ಮನವರಿಕೆ ಮಾಡಿದ್ದರೆ ರಸ್ತೆ ಖಾಲಿ ಮಾಡುತ್ತಿದ್ದೆವು…
ಪೊಲೀಸರು ಪ್ರತಿಭಟನಾ ನಿರತ ರೈತರನ್ನು ತಡೆಯಲು ಪ್ರಯತ್ನಿಸಿದರು. ಆದರೆ ಪೊಲೀಸರು ಮತ್ತು ರೈತರ ಸಂಖ್ಯೆ ಸಮಾನವಾಗಿತ್ತು. ನಾವು ರಸ್ತೆಯನ್ನು ತೆರವುಗೊಳಿಸಲಿಲ್ಲ. ಪ್ರಧಾನಿಯವರ ಕಾರ್ಯಕ್ರಮವನ್ನು ಹೇಗೆ ಬದಲಾಯಿಸಲಾಯಿತು ಎಂಬುದು ನಮಗೆ ತಿಳಿದಿಲ್ಲ. ಅವರು ರಸ್ತೆ ಮೂಲಕ ಬರುತ್ತಿದ್ದಾರೆ ಎಂದು ನಮಗೆ ಮನವರಿಕೆ ಮಾಡಿದ್ದರೆ ನಾವು ರಸ್ತೆಯನ್ನು ಖಾಲಿ ಮಾಡುತ್ತಿದ್ದೆವು. ಇದು ಗೊಂದಲಕ್ಕೆ ಕಾರಣವಾಯಿತು ಎಂದು ಅವರು ಹೇಳಿದರು.
ಭದ್ರತಾ ಲೋಪಕ್ಕೆ ಕಾರಣವಾದ ಘಟನೆಗೆ ಬಿಕೆಯು ಕ್ರಾಂತಿಕಾರಿ ಸದಸ್ಯರು ಕ್ಷಮೆಯಾಚಿಸುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಫೂಲ್, ಪ್ರತಿಭಟನೆ ಮಾಡುವುದು ‘ಪ್ರಜಾಪ್ರಭುತ್ವದ ಹಕ್ಕು’ ಎಂದು ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಇದು ನಮ್ಮ ಪ್ರಜಾಸತ್ತಾತ್ಮಕ ಹಕ್ಕು, ನಾವು ಏನು ಮಾಡಿದ್ದೇವೆ, ನಾವು ಸರಿಯಾದ ಕೆಲಸವನ್ನು ಮಾಡಿದ್ದೇವೆ ಎಂದು ಅವರು ಹೇಳಿದರು.

ನಿಮ್ಮ ಕಾಮೆಂಟ್ ಬರೆಯಿರಿ

advertisement