ವಾರಾಂತ್ಯ ಕರ್ಫ್ಯೂ: ನಾಳೆ ರಾಜ್ಯಾದ್ಯಂತ ಎಲ್ಲ ಶಾಲೆಗಳಿಗೆ ರಜೆ

ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಇಂದಿನಿಂದ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದೆ. ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಕುರಿತು ಶೀಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಈ ಕುರಿತು ಸುತ್ತೋಲೆ ಹೊರಡಿಸಿರುವಂತ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ಓಮಿಕ್ರಾನ್, ಕೊರೋನಾ ನಿಯಂತ್ರಣದ ಸುರಕ್ಷತಾ ಕ್ರಮವಾಗಿ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಲ್ಲಿ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಈಗಾಗಲೇ ತಿಳಿಸಲಾಗಿದೆ.
ದಿನಾಂಕ 06-01-2022ರಿಂದ 19-01-2022ರ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯ 10ನೇ ತರಗತಿ ವರೆಗಿನ ಎಲ್ಲಾ ಶಾಲೆಗಳನ್ನು, ಕೋಚಿಂಗ್ ಸೆಂಟರುಗಳನ್ನು ಸ್ಥಗಿತಗೊಳಿಸಲು ಸಹ ಸೂಚಿಸಲಾಗಿದೆ.

 

5 / 5. 2

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

ನಿಮ್ಮ ಕಾಮೆಂಟ್ ಬರೆಯಿರಿ

advertisement