ಹುಬ್ಬಳ್ಳಿ-ಧಾರವಾಡ ಬೈಪಾಸ್ 6 ಪಥದ ಎಕ್ಸ್ ಪ್ರೆಸ್‌ ಹೆದ್ದಾರಿ, 4 ಪಥದ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಟೆಂಡರ್: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನವದೆಹಲಿ ಅವರು ಹುಬ್ಬಳ್ಳಿ-ಧಾರವಾಡ ಬೈಪಾಸ್ 31ಕಿಮೀ ರಸ್ತೆಯನ್ನು ಷಟ್ಪಥ ಎಕ್ಸ್ ಪ್ರೆಸ್‌ ಹೆದ್ದಾರಿಯಾಗಿ ಮಾರ್ಪಡಿಸಲು ಟೆಂಡರ್ ಕರೆಯಲಾಗಿದೆ. ಜೊತೆಗೆ ಇ.ಪಿ.ಸಿ (ಎಂಜಿನಿಯರಿಂಗ್, ಸಂಗ್ರಹಣೆ ಮತ್ತು ನಿರ್ಮಾಣ) ಮಾದರಿಯಲ್ಲಿ ಈ ರಸ್ತೆ ನಿರ್ಮಿಸಲುಎರಡೂ ಬದಿಯಲ್ಲಿ ದ್ವಿಪಥದ ಸರ್ವಿಸ್ ರಸ್ತೆಯನ್ನು ನಿರ್ಮಿಸಲು ಟೆಂಡರ್ ಕರೆಯಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಮಗಾರಿಗೆ ಇಂದು ಟೆಂಡರ್ ಕರೆಯಲಾಗಿದ್ದು, ಫೆಬ್ರವರಿ 22 ಟೆಂಡರ್ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಕಾಮಗಾರಿ ಮುಗಿಸಲು 2.5 ವರ್ಷ ನಿಗದಿಗೊಳಿಸಲಾಗಿದೆ. ನಿರ್ಮಾಣದ ನಂತರ 5 ವರ್ಷದ ನಿರ್ವಹಣೆಯನ್ನೂ ಗುತ್ತಿಗೆದಾರರೇ ನಿರ್ವಹಿಸುವ ಕರಾರನ್ನೂ ಟೆಂಡರ್ ನಲ್ಲಿ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಈಗಿರುವ ಬೈಪಾಸಿನ ಎಲ್ಲ ಟೋಲ್ ಪ್ಲಾಜಾಗಳನ್ನು ತೆಗೆದು ಕೇವಲ ಒಂದು ಟೋಲ್ ಪ್ಲಾಜಾ ಮಾತ್ರ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಟೋಲ್ ಕೆಲಗೇರಿ ಮತ್ತು ನರೇಂದ್ರ ಮಧ್ಯೆ ಮಾಡಲಾಗುತ್ತದೆ. ಹುಬ್ಬಳ್ಳಿ-ಧಾರವಾಡ ಮಧ್ಯ ಸಂಚರಿಸುವ ಪ್ರಯಾಣಿಕರು ಟೋಲ್ ನಿಂದ ವಿನಾಯಿತಿ ನೀಡಲಾಗಿದೆ. ಈ ಬೈಪಾಸ್ ನಿರ್ಮಾಣದಿಂದ ನಗರ ಮಧ್ಯದೊಳಗಿನ ಸಂಚರಿಸುವ ವಾಹನ ದಟ್ಟಣೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.
ಪುಣೆ-ಬೆಂಗಳೂರು ಹೆದ್ದಾರಿ ವಿಸ್ತರಣೆ ಆಯಿತು. ಆದರೆ ಹುಬ್ಬಳ್ಳಿ-ಧಾರವಾಡ ಬೈಪಾಸ್ ವಿಸ್ತರಣೆ ಆಗಿಲ್ಲ. 6 ಪಥದ ರಸ್ತೆಯಲ್ಲಿ ವೇಗವಾಗಿ ವಾಹನ ಚಲಾಯಿಸಿಕೊಂಡು ಬರುವ ಚಾಲಕರು ಬೈಪಾಸ್ ನಲ್ಲಿಯೂ ಅದೇ ವೇಗದಲ್ಲಿ ಬರುವುದರಿಂದ ಇಂತಹ ಅಪಘಾತಗಳು ಸಂಭವಿಸುತ್ತವೆ. ಈ ಬಗ್ಗೆ ತಜ್ಞರ ಅಭಿಪ್ರಾಯದೊಂದಿಗೆ ಬೈಪಾಸ್ ಕೂಡಾ ಕನಿಷ್ಠ 6 ಪಥಗಳಿಗೆ ವಿಸ್ತರಣೆ ಆಗಬೇಕೆಂದು ಅವರು ಆಗ್ರಹಿಸಿದ್ದರು.
ಈ ಯೋಜನೆ ಒಟ್ಟು 1200 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳಿಯ ಗಬ್ಬೂರು ಎನ್.ಹೆಚ್.4 ರಸ್ತೆಯ 402.6 ಕಿಮೀಯಿಂದ ಧಾರವಾಡದ ನರೇಂದ್ರ ಕ್ರಾಸ್ ಬಳಿ 433.2 ಕಿಮೀ ವರೆಗಿನ ಒಟ್ಟು 31 ಕಿಮೀ 6 ಪಥದ ಎಕ್ಸ್ ಪ್ರೆಸ್‌ವೇ ಹಾಗೂ ನಾಲ್ಕು ಪಥದ ರಸ್ತೆ ನಿರ್ಮಾಣಕ್ಕೆ 800 ಕೋಟಿ ರೂ. ಹಾಗೂ ಭೂ ಸ್ವಾಧೀನ ಡಿಪಿಆರ್ ತಯಾರಿಕೆ ಹಾಗೂ ಇನ್ನಿತರೆ ಕಾರ್ಯಕ್ಕೆ 400 ಕೋಟಿ ರೂ. ಕೇಂದ್ರ ಸರ್ಕಾರ ನೀಡಿದೆ ಎಂದು ಹೇಳಿದ್ದಾರೆ.
ಈ ಬೈಪಾಸ್ ರಸ್ತೆಗೆ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಜೋಶಿ ಅಭಿನಂದಿಸಿದ್ದಾರೆ.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement