ಬೆಂಗಳೂರು: ಕರ್ನಾಟಕ ಕೂಡ ಡಿಜಿಟಲ್ ಕ್ಷೇತ್ರದಲ್ಲಿ ಕ್ರಾಂತಿ ಮಾಡುತ್ತಿದ್ದು, ಕರ್ನಾಟಕ ಕೊವಿಡ್ ವಾರ್ ರೂಮ್ ಮುಖ್ಯಸ್ಥರಾದ ಮನೀಶ್ ಮೌದ್ಗಿಲ್ ಮತ್ತು ಅವರ ತಂಡವು ಕೋವಿಡ್ ನಿರ್ವಹಣೆಯಲ್ಲಿ ತಂತ್ರಜ್ಞಾನ, ಡಿಜಿಟಲೀಕರಣವನ್ನು ಬಳಸಿದ್ದಕ್ಕಾಗಿ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿದೆ.
ಭಾರತ ಸರ್ಕಾರದ ಇ-ಆಡಳಿತ ಪ್ರಶಸ್ತಿ ಐಎಎಸ್ ಅಧಿಕಾರಿ ಮನೀಶ್ ಮೌದ್ಗಿಲ್ ಪಾತ್ರರಾಗಿದ್ದಾರೆ. ಶುಕ್ರವಾರ ಹೈದರಾಬಾದ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಪ್ರಶಸ್ತಿಯನ್ನು ವಿತರಿಸಿದ್ದಾರೆ.
ಸಾಂಕ್ರಾಮಿಕ ರೋಗವನ್ನು ನಿರ್ವಹಿಸುವಲ್ಲಿ ಮಾಹಿತಿ, ಸಂವಹನ ಮತ್ತು ತಂತ್ರಜ್ಞಾನ (ಐಸಿಟಿ) ಬಳಕೆಗಾಗಿ ಕರ್ನಾಟಕದ ಕೊವಿಡ್ -19 ವಾರ್ ರೂಮ್ಗೆ ಕೇಂದ್ರದ ಇ-ಆಡಳಿತ ಪ್ರಶಸ್ತಿಯನ್ನು ನೀಡಲಾಗಿದೆ. ಕರ್ನಾಟಕ ರಾಜ್ಯ ಕೊವಿಡ್ -19 ವಾರ್ ರೂಮ್ನ ಹಿಂದಿನ ಮೆದುಳಾಗಿರುವ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರು ಪ್ರಶಸ್ತಿ ಸ್ವೀಕರಿಸಿದರು.
ಐಎಎಸ್ ಮೌನೀಶ್ ಮೌದ್ಗಿಲ್ ತಂತ್ರಜ್ಞಾನವನ್ನು ಆಡಳಿತದಲ್ಲಿ ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಈ ಹಿಂದೆಯೂ ನಾನಾ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಈ ಹಿಂದೆ ಕೊರೊನಾ ದೇಶಾದ್ಯಂತ ಹರಡಿ ಮೊದಲ ಬಾರಿಗೆ ಲಾಕ್ಡೌನ್ ಆದ ಸಂದರ್ಭದಲ್ಲಿ ಕ್ವಾರಂಟೈನ್ಗೆ ಒಳಗಾದ ವ್ಯಕ್ತಿಗಳು ಹೊರಗೆ ಓಡಾಡುವುದನ್ನು ಪತ್ತೆಹಚ್ಚಲು ಐಎಎಸ್ ಅಧಿಕಾರಿ ಮನೀಶ್ ಮೌದ್ಗಿಲ್ ಮೊಬೈಲ್ ಆ್ಯಪ್ ಒಂದನ್ನು ಅಭಿವೃದ್ಧಿ ಪಡಿಸಿದ್ದಾರೆ.
ಕರ್ನಾಟಕದ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಕೂಡ ಕೊವಿಡ್ ರೂಂ ನಿರ್ವಹಣೆಯಲ್ಲಿ ಸಮಪರ್ಕವಾಗಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು, ಕೇಂದ್ರ ಸರ್ಕಾರದ ಇ-ಆಡಳಿತ ಪ್ರಶಸ್ತಿ ಪಡೆದಿರುವ ಮನೀಶ್ ಮೌದ್ಗಿಲ್ ತಂಡಕ್ಕೆ ಅಭಿನಂದಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ