ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯಗೆ ಜ್ವರ; ಹೀಗಾಗಿ ಪಾದಯಾತ್ರೆಯಿಂದ ವಾಪಸ್‌

ರಾಮನಗರ: ಮೇಕೆದಾಟು ಪಾದಯಾತ್ರೆಯಲ್ಲಿ ತೊಡಗಿಕೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಜ್ವರದಿಂದ ಬಳಲುತ್ತಿರುವ ಸಿದ್ದರಾಮಯ್ಯ ಅವರಿಗೆ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ, ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹೆಗ್ಗನೂರು ಗ್ರಾಮದಲ್ಲಿ ಸಿದ್ದರಾಮಯ್ಯ ವಿಶ್ರಾಂತಿ ಪಡೆದಿದ್ದಾರೆ. ಬೆಳಗ್ಗೆಯಿಂದ ಪಾದಯಾತ್ರೆ ನಡೆಸಿದ್ದ ಸಿದ್ದರಾಮಯ್ಯ, ಅನಂತರ ಆಯಾಸವಾಗಿ ಪಾದಯಾತ್ರೆಯಿಂದ ವಾಪಸ್‌ ಹೋಗಿದ್ದರು.
ಜ್ವರ ಹಿನ್ನೆಲೆ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸಾಗಿದ್ದಾರೆ. ಪಾದಯಾತ್ರೆ ನಡಿಗೆ ಅರ್ಧಕ್ಕೆ ಮೊಟಕುಗೊಳಿಸಿ ಸಿದ್ದರಾಮಯ್ಯ ಬೆಂಗಳೂರಿನತ್ತ ಹೊರಟಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡಿರುವ ಬಗ್ಗೆ ಬಿಜೆಪಿ ನಾಯಕ, ಸಚಿವ ಗೋವಿಂದ ಕಾರಜೋಳ ಟ್ವೀಟ್ ಮಾಡಿ ಆತಂಕ ವ್ಯಕ್ತಪಡಿಸಿದ್ದಾರೆ. ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡಿದ್ದು ನನಗೆ ಕಳವಳ ಆಗಿದೆ.ಸಿದ್ಧರಾಮಯ್ಯನವರೇ ದಯವಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ.ತಮ್ಮ ಆರೋಗ್ಯ ರಕ್ಷಣೆ ಮಹತ್ವದ್ದು ಎಂದು ಬರೆದುಕೊಂಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement