ಸಚಿವ ಮಾಧುಸ್ವಾಮಿಗೆ ಕೊರೊನಾ ಸೋಂಕು

ಬೆಂಗಳೂರು: ಸಚಿವ ಮಾಧುಸ್ವಾಮಿ ಮತ್ತು ಅವರ ಪುತ್ರಿಗೆ  ಸೋಂಕು ದೃಢಪಟ್ಟಿದೆ.
ಕೊರೊನಾ ಸೋಂಕು ತಗುಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಿಗ್ಗೆ ಚಿಕಿತ್ಸೆಗಾಗಿ ಬೆಂಗಳೂರಿನ ಹಳೆ ವಿಮಾನನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಿ ನಂತರ ಮನೆಗೆ ಮರಳಿದರು.
ಮುಖ್ಯಮಂತ್ರಿಗಳಿಗೆ ಕೊರೊನಾ ತಗುಲಿದ ನಂತರ ಅವರ ಸಂಪರ್ಕದಲ್ಲಿದ್ದ ಸಚಿವರು ಪರೀಕ್ಷೆಗೆ ಒಳಗಾಗುತ್ತಿದ್ದು, ಸಚಿವ ಮಾಧುಸ್ವಾಮಿ ಹಾಗೂ ಪುತ್ರಿಗೂ ಕೊರೊನಾ ದೃಢಪಟ್ಟಿದ್ದು, ಅವರು ಸಹ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೊರೊನಾ ಪರೀಕ್ಷೆಗೆ ಒಳಪಟ್ಟ ಆರೋಗ್ಯ ಸಚಿವ ಸುಧಾಕರ್ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಕೊರೊನಾ ನೆಗೆಟಿವ್ ಬಂದಿದೆ. ಸಚಿವ ಸುಧಾಕರ್ ೨ ದಿನಗಳ ಮನೆ ಪ್ರತ್ಯೇಕತೆಯಲ್ಲಿದ್ದಾರೆ.
ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ, ಶಾಸಕ ಹೆಚ್.ಎಂ ರೇವಣ್ಣ ಸಿ.ಎಂ. ಇಬ್ರಾಹಿಂ ಅವರಿಗೆ ಕೊರೊನಾ ದೃಢಪಟ್ಟಿದ್ದು, ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement