ಚಿಕ್ಕಬಳ್ಳಾಪುರ: ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ಸಿನ ಗೌರಿಬಿದನೂರು ಶಾಸಕ ಎನ್.ಎಚ್. ಶಿವಶಂಕರರೆಡ್ಡಿಗೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ನಿನ್ನೆ ಶಾಸಕ ಶಿವಶಂಕರರೆಡ್ಡಿ ಪಾದಯಾತ್ರೆಯಿಂದ ಗೌರಿಬಿದನೂರಿಗೆ ವಾಪಸ್ಸಾಗಿದ್ದರು. ಕೊರೊನಾ ಲಕ್ಷಣ ಇದ್ದ ಹಿನ್ನೆಲೆ ಕೊವಿಡ್ ಟೆಸ್ಟ್ ಮಾಡಿಸಿದ್ದರು. ವರದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಮಾಚಿ ಸಚಿವರಾದ ಎಚ್ ಎಮ್ ರೇವಣ್ಣ ಮತ್ತು ಸಿ.ಎಂ.ಇಬ್ರಾಹಿಂ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ನಿಮ್ಮ ಕಾಮೆಂಟ್ ಬರೆಯಿರಿ