ನೇತಾಜಿ ಜನ್ಮದಿನ ಜನವರಿ 23 ರಿಂದಲೇ ಗಣರಾಜ್ಯೋತ್ಸವ ಆಚರಣೆ ಆರಂಭ: ಕೇಂದ್ರದ ನಿರ್ಧಾರ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಒಳಗೊಂಡಂತೆ ಗಣರಾಜ್ಯೋತ್ಸವವು ಪ್ರತಿ ವರ್ಷ ಜನವರಿ 24ರ ಬದಲಿಗೆ ಜನವರಿ 23ರಿಂದ ಪ್ರಾರಂಭವಾಗಲಿದೆ.
ಕಳೆದ ವರ್ಷ, ನರೇಂದ್ರ ಮೋದಿ ಸರ್ಕಾರವು ಬೋಸ್ ಅವರ ಜನ್ಮದಿನದ ಸ್ಮರಣಾರ್ಥ ಜನವರಿ 23 ಅನ್ನು ‘ಪರಾಕ್ರಮ್ ದಿವಸ’ ಎಂದು ಆಚರಿಸಲು ನಿರ್ಧರಿಸಿತ್ತು. ಭಾರತದ ನೇತಾಜಿ ಎಂದೇ ಪ್ರಸಿದ್ಧಿ ಹೊಂದಿದ ಸುಭಾಷ್ ಚಂದ್ರ ಬೋಸ್ 23 ಜನವರಿ 1897 ರಂದು ಜನಿಸಿದರು. ಈಗ ಅವರ ಜನ್ಮದಿನದಂದೇ ಗಣರಾಜ್ಯೋತ್ಸವ ಪ್ರಾರಂಭಿಸಲು ನಿರ್ಧರಿಸಿದೆ.ಇತ್ತೀಚಿನ ನಿರ್ಧಾರವು ಭಾರತದ ಇತಿಹಾಸ ಮತ್ತು ಸಂಸ್ಕೃತಿಯ ಪ್ರಮುಖ ಅಂಶಗಳನ್ನು ಆಚರಿಸಲು ಅಥವಾ ಸ್ಮರಿಸಲು ಕೇಂದ್ರ ಸರ್ಕಾರದ ಗಮನಕ್ಕೆ ಅನುಗುಣವಾಗಿದೆ ಎಂದು ಸರ್ಕಾರಿ ಮೂಲಗಳು ಶನಿವಾರ ತಿಳಿಸಿವೆ.

ಕೇಂದ್ರ ಸರ್ಕಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ತೆರಳಿದ್ದ ಜಾಗಗಳನ್ನು ದೇಶಾದ್ಯಂತ ಪ್ರಚಾರ ಮಾಡಲು ಯೋಜನೆಗಳನ್ನು ರೂಪಿಸಿದೆ. ಅಕ್ಟೋಬರ್ 21, 1943 ರಂದು ಬೋಸ್ ಅವರು ‘ಆಜಾದ್ ಹಿಂದ್ ಫೌಜ್’ ಹೆಸರಿನ ಸೇನೆಯನ್ನು ಘೋಷಿಸಿದ್ದರು. ನೇತಾಜಿ ಸ್ಮರಣಾರ್ಥ ಕಾರ್ಯಕ್ರಮಗಳ ಭಾಗವಾಗಿ ಪ್ರವಾಸೋದ್ಯಮ ಸಚಿವಾಲಯವು ಪ್ರವಾಸಗಳನ್ನು ಆಯೋಜಿಸಲು ಮುಂದಾಗಿದೆ.
ಸರ್ಕಾರ ಇಂಥ ಅನೇಕ ನಿರ್ಧಾರಗಳನ್ನು ತೆಗೆದುಕೊಂಡಿದೆ. ಆಗಸ್ಟ್ 14 ಅನ್ನು ವಿಭಜನೆಯ ಭಯಾನಕ ನೆನಪಿನ ದಿನ, ಅಕ್ಟೋಬರ್ 31 ಅನ್ನು ರಾಷ್ಟ್ರೀಯ ಏಕತಾ ದಿನ (ಸರ್ದಾರ್ ಪಟೇಲ್ ಅವರ ಜನ್ಮದಿನ), ನವೆಂಬರ್ 15 ಜನಜಾತಿಯ ಗೌರವ್ ದಿವಸ (ಬಿರ್ಸಾ ಮುಂಡಾ ಅವರ ಜನ್ಮ ವಾರ್ಷಿಕೋತ್ಸವ), ನವೆಂಬರ್ 26 ಅನ್ನು ಸಂವಿಧಾನದ ದಿನ ಮತ್ತು ಡಿಸೆಂಬರ್ 26 ರಂದು ವೀರ್ ಬಾಲ್ ದಿವಸ್ (ಗುರು ಗೋವಿಂದ್ ಸಿಂಗ್ ಅವರ ನಾಲ್ವರು ಪುತ್ರರಿಗೆ ಗೌರವ) ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಐಷಾರಾಮಿ ಕಾರು, ದುಬೈ, ಲಂಡನ್‌ನಲ್ಲಿ ಮನೆ... : ಈ ಬಿಜೆಪಿ ಅಭ್ಯರ್ಥಿ ಆಸ್ತಿ ₹1,400 ಕೋಟಿ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement