ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿರುವ ಉದ್ಯೋಗ ಮೇಳವನ್ನು ಜನವರಿ 25ಕ್ಕೆ ಮುಂದೂಡಲಾಗಿದೆ.
ಸರ್ಕಾರದ ನಿಯಮಾವಳಿಗಳ ಪ್ರಕಾರ ಜನವರಿ 23ರಂದು ವೀಕೆಂಡ್ ಕರ್ಫ್ಯೂ ಇರುವುದರಿಂದ ಉದ್ಯೋಗ ಮೇಳವನ್ನು 25ರಂದು ಮುಂದೂಡಲಾಗಿದೆ. ಈ ಮೇಳದಲ್ಲಿ 15ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಆಸಕ್ತ ವಿದ್ಯಾರ್ಥಿಗಳು 0836-2462202 ಅಥವಾ 7760011848ಕ್ಕೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು ಹಾಗೂ ಈ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಕಂಪನಿಯವರು ಸಹ ತಮ್ಮ ಕಂಪನಿಯ ಹೆಸರನ್ನು ನಿಗದಿತ ಸಮಯದೊಳಗಾಗಿ ನೀಡಿ ಈ ಮೇಳದಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ