ಕೇರಳ ಸರ್ಕಾರ ಮಾರ್ಗದರ್ಶಿ ಸೂತ್ರ ನಿರ್ಲಕ್ಷಿಸಿದ್ದರಿಂದ ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕಾರ; ಕಟೀಲು

ಬೆಂಗಳೂರು: ಗಣರಾಜ್ಯೋತ್ಸವ ಸಮಿತಿಯಿಂದ ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕಾರ ಮಾಡಿದ್ದಕ್ಕೆ ಕೇರಳ ಸರ್ಕಾರದ ನಿರ್ಲಕ್ಷ್ಮ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಗಣರಾಜ್ಯೋತ್ಸವ ದಿನದಂದು ದೆಹಲಿಯ ರಾಜಪಥದಲ್ಲಿ ಚಲಿಸುವ ಟ್ಯಾಬ್ಲೋಗಳಿಗೆ ಕೆಲವು ಮಾರ್ಗದರ್ಶಿ ಸೂತ್ರಗಳಿವೆ. ಕೇಂದ್ರ ಕಳುಹಿಸಿದ ಮಾರ್ಗದರ್ಶಿ ಸೂತ್ರಗಳನ್ನು ಕೇರಳ ನಿರ್ಲಕ್ಷ್ಯ ಮಾಡಿದೆ ಎಂದು ಹೇಳಿದ್ದಾರೆ.

ಕೇರಳ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ರದ್ದಾಗಿದೆಯೇ ವಿನಃ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಎನ್ನುವ ಕಾರಣಕ್ಕೆ ಕೇಂದ್ರ ಸರಕಾರ ರದ್ದು ಮಾಡಿಲ್ಲ ಎಂದು ತಿಳಿಸಿದ್ದಾರೆ.
ಗಣರಾಜ್ಯೋತ್ಸವ ಸಮಿತಿಯಿಂದ ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕಾರ ಸದ್ಯ ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗುತ್ತಿರುವ ಮಧ್ಯೆ ಈ ಕುರಿತು ಟ್ವೀಟ್‌ ಮಾಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement