ಕತ್ತರಿಸಿದ ಗಂಡನ ರುಂಡದ ಸಮೇತ ಪೊಲೀಸ್​ ಠಾಣೆಗೆ ಬಂದು ಶರಣಾದ ಪತ್ನಿ !

ಚಿತ್ತೂರು (ಆಂಧ್ರಪ್ರದೇಶ):
ಆಘಾತಕಾರಿ ಘಟನೆಯಲ್ಲಿ ಆಂಧ್ರಪ್ರದೇಶದ ಮಹಿಳೆಯೊಬ್ಬಳು ತನ್ನ ಪತಿಯನ್ನು ಶಿರಚ್ಛೇದ ಮಾಡಿ ನಂತರ ಗುರುವಾರ ಪೊಲೀಸರ ಮುಂದೆ ರುಂಡದ ಸಮೇತ ಶರಣಾಗಿದ್ದಾಳೆ…!
ಪೊಲೀಸರ ಮಾಹಿತಿಯಂತೆ ರಾಜ್ಯದ ಚಿತ್ತೂರು ಜಿಲ್ಲೆಯ ರೇಣಿಗುಂಟದ ಮಹಿಳೆ ಶರಣಾಗುವ ಮುನ್ನ ಪತಿಯ ತಲೆಯನ್ನು ಕೈಯಲ್ಲಿ ಹಿಡಿದು ಪೊಲೀಸ್ ಠಾಣೆಗೆ ತೆರಳಿದ್ದಳು.
ಆರೋಪಿಯನ್ನು 53 ವರ್ಷದ ಭಾಷ್ಯಂ ರವಿಚಂದ್ರನ್ ಅವರ ಪತ್ನಿ ವಸುಂಧರಾ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ರವಿಚಂದ್ರನ್ (53) ಮತ್ತು ವಸುಂಧರಾ ದಂಪತಿಗಳು ಪೊಲೀಸ್​ಲೈನ್​ ನಗರದಲ್ಲಿ ವಾಸವಿದ್ದರು. ಅವರಿಗೆ 20 ವರ್ಷದ ಮಗನಿದ್ದಾನೆ. ಗುರುವಾರ ಬೆಳಗ್ಗೆ ದಂಪತಿ ನಡುವೆ ಸಣ್ಣಪುಟ್ಟ ಜಗಳ ನಡೆದಿದೆ. ಈ ಹಿನ್ನೆಲೆ ಕುಪಿತಳಾದ ವಸುಂಧರಾ, ಚಾಕುವಿನಿಂದ ತನ್ನ ಪತಿ ಮೇಲೆ ಬರ್ಬರವಾಗಿ ಹಲ್ಲೆ ನಡೆಸಿದ್ದಾಳೆ, ಬಳಿಕ ತಲೆ ಕತ್ತರಿಸಿದ್ದಾರೆ. ಬಳಿಕ ತಲೆಯನ್ನು ಬ್ಯಾಗ್​ನಲ್ಲಿಟ್ಟುಕೊಂಡು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಸತ್ಯಾಸತ್ಯತೆಗಳನ್ನು ಪರಿಶೀಲಿಸಿದ ನಂತರ ಪೊಲೀಸರು ಕುಟುಂಬಸ್ಥರ ಮನೆಯಲ್ಲಿ ಶವವನ್ನು ಪತ್ತೆಹಚ್ಚಿದ್ದಾರೆ. ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ಪ್ರಗತಿಯಲ್ಲಿದೆ.
ಮುಂದಿನ ಕಾನೂನು ಪ್ರಕ್ರಿಯೆಗಾಗಿ ಮಹಿಳೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಕೆ ಈ ಕೃತ್ಯ ಎಸಗಿದ್ದಾಳೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಮತದಾನಕ್ಕೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement