ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಸೇರ್ಪಡೆ ನಂತರ ಮುಲಾಯಂ ಸಿಂಗ್ ಆಶೀರ್ವಾದ ಪಡೆದ ಅಪರ್ಣಾ ಯಾದವ್‌

ನವದೆಹಲಿ: ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಬಿಜೆಪಿ ಸೇರಿದ ತಮ್ಮ ಕಿರಿಯ ಸೊಸೆ ಅಪರ್ಣಾ ಯಾದವ್‌ ಅವರಿಗೆ ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಆಶೀರ್ವಾದ ಮಾಡಿದ್ದಾರೆ.
ಅಪರ್ಣಾ ಯಾದವ್‌ ಬಿಜೆಪಿ ಸೇರ್ಪಡೆಯಾದ ನಂತರ ಇದು ಮುಲಾಯಂ ಸಿಂಗ್‌ ಯಾದವ್‌ ಅವರನ್ನು ಮೊದಲ ಬಾರಿಗೆ ಭೇಟಿ ಮಾಡಿ ಆಶಿರ್ವಾದ ಪಡೆದಿದ್ದಾರೆ. 2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಲಹಾಬಾದ್ ಕಂಟೋನ್ಮೆಂಟ್‌ನಿಂದ ಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಗೆಲ್ಲಲು ವಿಫಲವಾದ ಅಪರ್ಣಾ ಯಾದವ್‌ ಅವರು ಸಮಾಜವಾದಿ ಪಾರ್ಟಿಯಲ್ಲಿದ್ದರೂ ಕೇಂದ್ರದ ಬಿಜೆಪಿ ಸರ್ಕಾರದ ವಿವಿಧ ಉಪಕ್ರಮಗಳಾದ ಆರ್ಟಿಕಲ್ 370 ರದ್ದತಿ ಮತ್ತು ‘ಸ್ವಚ್ಛ ಭಾರತ’ ಅಭಿಯಾನವನ್ನು ಬೆಂಬಲಿಸಿದರು ಜೊತೆಗೆ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ 11 ಲಕ್ಷ ರೂ.ಗಳನ್ನು ದೇಣಿಗೆ ನೀಡಿದರು.
ಮುಲಾಯಂ ಸಿಂಗ್ ಯಾದವ್ ಅವರು ಅಪರ್ಣಾ ಯಾದವ್ ಅವರನ್ನು ಮೌನವಾಗಿ ಅನುಮೋದಿಸಿರುವುದು ಯಾದವ್ ಕುಟುಂಬದಲ್ಲಿನ ದೀರ್ಘಕಾಲದ ಬಿರುಕುಗಳ ಪತನ ಎಂದು ಗ್ರಹಿಸಲಾಗುತ್ತಿದೆ. 2017 ರ ಜನವರಿಯಲ್ಲಿ ಅವರ ಸ್ವಂತ ಮಗ ಅಖಿಲೇಶ್ ಅವರ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಂಡ ನಂತರ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ರಾಜಕೀಯವಾಗಿ ಹೆಚ್ಚು ಸುದ್ದಿಯಲ್ಲಿಲ್ಲ. ಅಲ್ಲದೆ ಪೂರ್ಣ ಪ್ರಮಾಣದ ಪ್ರಚಾರದಿಂದಲೂ ದೂರವಿದ್ದಾರೆ. ಆದಾಗ್ಯೂ, ಅವರು ಜನವರಿ 10 ರಂದು ಸಮಾಜವಾದಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಅಪರೂಪವಾಗಿ ಕಾಣಿಸಿಕೊಂಡರು, ಅಲ್ಲಿ ಮುಂಬರುವ ಉತ್ತರ ಪ್ರದೇಶದ ಚುನಾವಣೆಯಲ್ಲಿ ಪಕ್ಷದ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವ್ಯಂಗ್ಯ
ತಮ್ಮ ಸಂಬಂಧಿ ಅಪರ್ಣಾ ಯಾದವ್ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಅಖಿಲೇಶ್ ಯಾದವ್ ಅವರು ಸಮಾಜವಾದಿ ಸಿದ್ಧಾಂತದ “ವಿಸ್ತರಣೆ” ಯಲ್ಲಿ ಸಂತೋಷವಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೆ ‘ರಾಷ್ಟ್ರೀಯತೆ’ ಬ್ಯಾನರ್‌ ಮೇಲೆ ಬಿಜೆಪಿ ಸೇರ್ಪಡೆಯನ್ನು ಸಮರ್ಥಿಸಿಕೊಂಡ ಅಪರ್ಣಾ ಯಾದವ್‌ ಅವರನ್ನು ಟೀಕಿಸಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಮೊದಲು ನಾನು ಅಪರ್ಣಾ ಯಾದವ್ ಅವರನ್ನು ಅಭಿನಂದಿಸುತ್ತೇನೆ ಮತ್ತು ನನ್ನ ಶುಭಾಶಯಗಳನ್ನು ನೀಡುತ್ತೇನೆ. ಇದಲ್ಲದೆ, ಸಮಾಜವಾದಿ ಸಿದ್ಧಾಂತವು ವಿಸ್ತರಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ನಮ್ಮ ಸಿದ್ಧಾಂತವು ಅಲ್ಲಿಗೆ (ಬಿಜೆಪಿ) ತಲುಪಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಪಹಲ್ಗಾಮ್‌ ದಾಳಿ | ಪಾಕ್ ಬೆಂಬಲಿಸಿದ್ದ ಟರ್ಕಿಗೆ ದೊಡ್ಡ ಹೊಡೆತ ನೀಡಿದ ಭಾರತ : ಸೆಲೆಬಿ ಏರ್‌ಪೋರ್ಟ್‌ ಸರ್ವೀಸಸ್‌ ಗೆ ಭದ್ರತಾ ಅನುಮತಿ ರದ್ದು...

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement