ಕೊಲೆ ಮಾಡಲು ಬಂದವರ ಕಣ್ಣಿಗೆ ಖಾರದ ಪುಡಿ ಎರಚಿ ಪತಿಯನ್ನು ಬಚಾವ್ ಮಾಡಿದ ಮಹಿಳೆ..!

ಹೈದರಾಬಾದ್: ಮಹಿಳೆಯೊಬ್ಬಳು ಪತಿ ಹತ್ಯೆಗೆ ಬಂದಿದ್ದ ನಾಲ್ವರು ದುಷ್ಕರ್ಮಿಗಳ ಕಣ್ಣಿಗೆ ಖಾರದ ಪುಡಿ ಎರಚಿ ತನ್ನ ಪತಿ ಉಳಿಸಿಕೊಂಡಿರುವ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ ನಡೆದಿದೆ.
ದಿ ವಾರಂಗಲ್ ಜಿಲ್ಲಾ ಲಾರಿ ಅಸೋಸಿಯೇಶನ್ ಅಧ್ಯಕ್ಷ ವೇಮುಲಾ ಭೂಪಾಲ್ ಅವರ ಮನೆಗೆ ಬುಧವಾರ ಮಧ್ಯರಾತ್ರಿ ನಾಲ್ವರು ಮಂದಿ ದುಷ್ಕರ್ಮಿಗಳು ಆಟೊದಲ್ಲಿ ಬಂದಿದ್ದಾರೆ. ಇವರಲ್ಲಿ ಮೂವರು ವೇಮುಲಾ ಮನೆಗೆ ಒಳಗೆ ನುಗ್ಗಿ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲು ಯತ್ನಿಸಿದ್ದಾರೆ. ಕೂಡಲೇ ಎಚ್ಚೆತ್ತ ವೇಮುಲಾ ಪತ್ನಿ ಕಲ್ಯಾಣಿ ಅಡುಗೆ ಮನೆಗೆ ಓಡಿ ಹೋಗಿ ಖಾರದ ಪುಡಿ ತಂದು ದುಷ್ಕರ್ಮಿಗಳ ಕಣ್ಣಿಗೆ ಎರಚಿದ್ದಾಳೆ. ಅಲ್ಲದೆ ನಮ್ಮನ್ನು ಕಾಪಾಡಿ ಎಂದು ಜೋರಾಗಿ ಕೂಗಿದ್ದಾಳೆ. ಈಕೆಯ ಚೀರಾಟ ಕೇಳಿ ನೆರೆ ಹೊರೆಯವರು ಕೂಡಲೇ ಸ್ಥಳಕ್ಕೆ ಬಂದಿದ್ದಾರೆ. ಆರೋಪಿಗಳಲ್ಲಿ ಒಬ್ಬನಾದ ರಂಜಿತ್ ಎಂಬಾತನ ಕಣ್ಣಿಗೆ ಹೆಚ್ಚು ಕಾರದ ಪುಡಿ ಬಿದ್ದ ಪರಿಣಾಮ ಆತ ಅಲ್ಲಿಂದ ಪರಾರಿಯಾಗಲು ಸಾಧ್ಯವಾಗದೆ ಸಿಕ್ಕಿಬಿದ್ದಿದಾನೆ. ಉಳಿದ ಮೂವರು ಆರೋಪಿಗಳು ಆಟೋದಲ್ಲಿ ಪರಾರಿಯಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ರಂಜಿತ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಲ್ಯಾಣಿ ಅವರ ಧೈರ್ಯ ಹಾಗೂ ಸಮಯ ಪ್ರಜ್ಞೆ ಯಿಂದ ತನ್ನ ಪತಿಯನ್ನು ಉಳಿಸಿಕೊಂಡಿದ್ದಾಳೆ.

ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement