ಕಾರವಾರ: ಗಣರಾಜ್ಯೋತ್ಸವ ಧ್ವಜಾರೋಹಣ ಮುಗಿದ ನಂತರ ಎಎಸ್‌ಐ ಹೃದಯಾಘಾತದಿಂದ ಸಾವು

.ಕಾರವಾರ: ಗಣರಾಜ್ಯೋತ್ಸವ ಧ್ವಜಾರೋಹಣದಲ್ಲಿ ಪಾಲ್ಗೊಂಡ ನಂತರ ಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಾರವಾರದಲ್ಲಿ ಇಂದು, ಮಂಗಳವಾರ ನಡೆದಿದೆ.
ನಗರದ ಸಂಚಾರಿ ಠಾಣೆಯಲ್ಲಿ ಎಎಸ್​ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಬ್ದುಲ್ ಖಾದರ್ ಮಹ್ಮದ್ ಶೇಖ್ (57) ಮೃತ ಅಧಿಕಾರಿಯಾಗಿದ್ದಾರೆ. ಸಂಚಾರಿ ಠಾಣೆಯಲ್ಲಿ ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು. ಧ್ವಜಾರೋಹಣ ಮುಗಿದ ಕೆಲ ಸಮಯದ ಬಳಿಕ ಅವರಿಗೆ ಎದೆನೋವು ಕಾಣಿಸಿಕೊಂಡು ಠಾಣೆಯಲ್ಲಿಯೇ ಕುಸಿದುಬಿದ್ದಿದ್ದಾರೆ.
ತಕ್ಷಣ ಅವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

 

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನ ಕೊಲೆ

ನಿಮ್ಮ ಕಾಮೆಂಟ್ ಬರೆಯಿರಿ

advertisement