ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ ನಾಯಕರಾಗಿ ಬಿ.ಕೆ.ಹರಿಪ್ರಸಾದ ನೇಮಕ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಮಹತ್ವದ ಬದಲಾವಣೆ ಆಗಿದ್ದು, ನೂತನವಾಗಿ ವಿಧಾನ ಪರಿಷತ್ ನಾಯಕ, ಮುಖ್ಯ ಸಚೇತಕ ಮತ್ತು ವಿಧಾನ ಪರಿಷತ್ ಉಪ ನಾಯಕರನ್ನು ನೇಮಿಸಲಾಗಿದೆ.
ಈಗ ಬಿ.ಕೆ.ಹರಿಪ್ರಸಾದ ಅವರನ್ನು ಕಾಂಗ್ರೆಸ್ಸಿನ ವಿಧಾನ ಪರಿಷತ್ ನಾಯಕರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಅವರು, ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ ನಾಯಕರಾಗಿ ಬಿ.ಕೆ.ಹರಿಪ್ರಸಾದ್, ಮುಖ್ಯ ಸಚೇತಕರಾಗಿ ಪ್ರಕಾಶ್ ರಾಥೋಡ ಮತ್ತು ಕ ಪರಿಷತ್ತಿನಲ್ಲಿ ಕಾಂಗ್ರೆಸ್ ಪಕ್ಷದ ಉಪ ನಾಯಕರಾಗಿ ಕೆ.ಗೋವಿಂದರಾಜ್ ಅವರನ್ನ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ನಿಮ್ಮ ಕಾಮೆಂಟ್ ಬರೆಯಿರಿ

advertisement