ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊಮ್ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು, ಶುಕ್ರವಾರ ಬೆಳಗ್ಗೆ ಸುಮಾರು 10 ಗಂಟೆಯಲ್ಲಿ ವಸಂತ ನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ (30) ಅವರು ಪತ್ತೆಯಾಗಿದ್ದಾರೆ.
ಡಾ.ಸೌಂದರ್ಯ ಅವರು ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.
ಸೌಂದರ್ಯ ಅವರು ಬೆಂಗಳೂರಿನ ಎಂ.ಎಸ್‌. ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದರು. 2018ರಲ್ಲಿ ವೈದ್ಯ ಡಾ. ನೀರಜ್‌ ಅವರನ್ನು ಮದುವೆಯಾಗಿದ್ದರು. ಮೃತ ಸೌಂದರ್ಯಗೆ ಒಂದು ಮಗು ಇದೆ. ಸೌಂದರ್ಯ ಪತಿ ನೀರಜ್ ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಇತ್ತ ಸೌಂದರ್ಯ 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೌಂದರ್ಯ ಪತಿ ನೀರಜ ಬೆಳಿಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಇತ್ತ ಸೌಂದರ್ಯ 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಕೆಲಸದವರು ಬಂದಾಗ ಬಾಗಿಲು ತೆಗೆಯದಿದ್ದಾಗ ಸೌಂದರ್ಯ ಪತಿ ಡಾ. ನೀರಜ್‌ ಅವರಿಗೆ ಕರೆ ಮಾಡಿದ್ದರು. ಅನುಮಾನಗೊಂಡ ನೀರಜ್, ಪೊಲೀಸರನ್ನು ಸಂಪರ್ಕಿಸಿ ಸ್ಥಳಕ್ಕೆ ಕರೆಸಿಕೊಂಡಿದ್ದರು. ಬಾಗಿಲು ತೆರದು ನೋಡಿದಾಗ, ಕೊಠಡಿಯಲ್ಲಿ ಸೌಂದರ್ಯ ಅವರ ಮೃತದೇಹ ನೇಣು ಬಿಗಿದಿದ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ನಂತರ, ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಗಿದೆ. ಇದೊಂದು ಆತ್ಮಹತ್ಯೆ ಎಂಬುದು ಗೊತ್ತಾಗುತ್ತಿದ್ದು, ಕಾರಣ ಪತ್ತೆ ಮಾಡಲಾಗುತ್ತಿದೆ’ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement