ವೈನ್ ಮದ್ಯವಲ್ಲ, ವೈನ್ ಮಾರಾಟ ಹೆಚ್ಚಾದರೆ ರೈತರಿಗೆ ಲಾಭ

ಮುಂಬೈ: ವೈನ್ ಮದ್ಯವಲ್ಲ, ವೈನ್ ಮಾರಾಟ ಹೆಚ್ಚಿದರೆ ರೈತರಿಗೆ ಹೆಚ್ಚಿನ ಲಾಭ ಬರುತ್ತದೆ ಎಂದು ಶಿವಸೇನೆಯ ಮುಖಂಡ ಸಂಜಯ ರಾವತ್ ಹೇಳಿದ್ದಾರೆ.
ರಾಜ್ಯದ ಸೂಪರ್ ಮಾರ್ಕೆಟುಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡಲು ಮಹಾರಾಷ್ಟ್ರ ಸಚಿವ ಸಂಪುಟ ಅನುಮೋದನೆ ನೀಡಿದ ಬೆನ್ನಲ್ಲಿ ರಾವತ್ ಈ ರೀತಿ ಸಮರ್ಥಿಸಿಕೊಂಡಿದ್ದಾರೆ.
ಈ ಕ್ರಮದಿಂದ ರೈತರ ಆದಾಯ ದ್ವಿಗೊಳ್ಳಲಿದೆ. ಆದರೆ ಬಿಜೆಪಿ ಸುಮ್ಮನೇ ವಿರೋಧಿಸುತ್ತಿದೆ, ರೈತರಿಗಾಗಿ ಏನೂ ಮಾಡಿಲ್ಲ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಒಂದು ಸಾವಿರ ಚದರ ಅಡಿಗೂ ಹೆಚ್ಚು ವಿಸ್ತೀರ್ಣ ಹೊಂದಿರುವ ಸೂಪರ್ ಮಾರ್ಕೆಟ್ ಗಳಲ್ಲಿ ವೈನ್ ಮಾರಾಟ ಮಾಡಬಹುದಾಗಿದೆ. ನಾಸಿಕ್, ಪುಣೆ, ಸಾಂಗ್ಲಿ, ಸೋಲಾಪುರ ಹಾಗೂ ಇತರ ಪ್ರದೇಶಗಳ ದ್ರಾಕ್ಷಿ ಬೆಳೆಗಾರರು, ಕೃಷಿಕರು ಮತ್ತು ವೈನ್ ಉತ್ಪಾದನೆ ವಲಯಕ್ಕೆ ಬಲ ತುಂಬುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ನವಾಬ್ ಮಲಿಕ್ ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement