ತುಮಕೂರು : ಮಹೀಂದ್ರಾ ಶೋ ರೂಂನಲ್ಲಿ ರೈತನಿಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮಹತ್ವದ ಬೆಳವಣಿಗೆ ನಡೆದಿದೆ.
ನಗರದ ಮಹೀಂದ್ರಾ ಅಂಡ್ ಮಹೀಂದ್ರಾ ಎಸ್ ಯುವಿ ಶೋರೂಂನಲ್ಲಿ ಮಾರಾಟ ಸಿಬ್ಬಂದಿಯಿಂದ ರೈತರೊಬ್ಬರು ಅವಮಾನಕ್ಕೊಳಗಾಗಿದ್ದರು.
ಈಗ ತುಮಕೂರು ಶುಕ್ರವಾರ ರಾಮನಪಾಳ್ಯದ ರೈತ ಕೆಂಪೇಗೌಡ ಅವರಿಗೆ ಮಹೀಂದ್ರಾ ಕಂಪನಿ ಹೊಸ ವಾಹನ ಕಳುಹಿಸಿಕೊಟ್ಟಿದೆ. ಈ ಕುರಿತು ಸ್ವತಃ ಆನಂದ್ ಮಹೀಂದ್ರ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ರೈತ ಕೆಂಪೇಗೌಡರ ಸಂತಸ ಹಂಚಿಕೊಂಡಿದ್ದಾರೆ.
ಹತ್ತು ರೂಪಾಯಿ ಕೊಡುವ ಯೋಗ್ಯತೆ ಇಲ್ಲ ಎಂದು ಅಲ್ಲಿನ ಸಿಬ್ಬಂದಿಗೆ ಕೆಂಪೇಗೌಡ ಅವರಿಗೆ ಅವಮಾನ ಆಗಿತ್ತು. ಅದನ್ನೇ ಚಾಲೆಂಜ್ ಆಗಿ ಸ್ವೀಕರಿಸಿದ ಕೆಂಪೇಗೌಡ ಒಂದು ಗಂಟೆಯಲ್ಲಿ ಹತ್ತು ಲಕ್ಷ ರೂಪಾಯಿ ಹಣ ತಂದು ವಾಹನ ನೀಡುವಂತೆ ಪಟ್ಟು ಹಿಡಿದಿದ್ದರು. ಆಗ ಸಿಬ್ಬಂದಿಯೇ ಕಂಗಾಲಾಗಿದ್ದರು. ವಃನ ನೀಡಲು ಮೂರು ನಾಲ್ಕು ದಿನ ಸಮಯ ಕೋರಿದ್ದರು.
ಇದು ರಾಜ್ಯಾದ್ಯಂತ ಸುದ್ದಿಯಾಗಿತ್ತು. ಬಳಿಕ ಪ್ರಕರಣ ಸಂಬಂಧ ಟ್ವೀಟ್ ಮಾಡಿದ್ದ ಆನಂದ್ ಮಹೀಂದ್ರಾ, ಮಹೀಂದ್ರಾ ಕಂಪನಿಯ ಮೂಲ ಉದ್ದೇಶ ನಮ್ಮ ಸಮುದಾಯದ ಎಲ್ಲ ಭಾಗಿದಾರರನ್ನು ಶಕ್ತಿವಂತರನ್ನಾಗಿ ಮಾಡುವುದು. ಪ್ರತಿಯೊಬ್ಬರ ಘನತೆ ಎತ್ತಿ ಹಿಡಿಯುವುದು ನಮ್ಮ ಆದ್ಯತೆಯಾಗಿದ್ದು, ಈ ತತ್ವದಿಂದ ದೂರ ಸರಿದರೆ ಅದರ ಬಗ್ಗೆ ಗಮನ ಹರಿಸಿ, ಸೂಕ್ತ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದರು. ಇದೀಗ ರೈತನ ಮನೆಗೆ ಮಹೀಂದ್ರ ಗೂಡ್ಸ್ ವಾಹನ ಆಗಮಿಸಿದೆ. ಶುಕ್ರವಾರ ರೈತ ಕೆಂಪೇಗೌಡಗೆ ಕಂಪನಿ ವಾಹನ ಡೆಲಿವರಿ ಮಾಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ