ಉತ್ತರ ಪ್ರದೇಶ ಚುನಾವಣೆ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ..!

ಹಾಪುರ(ಉತ್ತರ ಪ್ರದೇಶ): ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇದಲ್ಲಿ ಛಜರ್ಸಿ ಟೋಲ್ ಪ್ಲಾಜಾ ಬಳಿ ತನ್ನ ವಾಹನದ ಮೇಲೆ ಕನಿಷ್ಠ 3-4 ಸುತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಗುರುವಾರ ಆರೋಪಿಸಿದ್ದಾರೆ.
ಎಐಎಂಐಎಂ ಮುಖ್ಯಸ್ಥರು ಉತ್ತರಪ್ರದೇಶದ ಮೀರತ್‌ನ ಕಿಥೌರ್‌ನಲ್ಲಿ ಚುನಾವಣಾ ಸಂಬಂಧಿತ ಕಾರ್ಯಕ್ರಮದ ನಂತರ ದೆಹಲಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.
ಮೀರತ್‌ನ ಕಿಥೌರ್‌ನಲ್ಲಿ ಚುನಾವಣಾ ಕಾರ್ಯಕ್ರಮದ ನಂತರ ನಾನು ದೆಹಲಿಗೆ ಹೊರಟಿದ್ದೆ. ಛಜರ್ಸಿ ಟೋಲ್ ಪ್ಲಾಜಾ ಬಳಿ ಇಬ್ಬರು ನನ್ನ ವಾಹನದ ಮೇಲೆ ಸುಮಾರು ಮೂರರಿಂದ ನಾಲ್ಕು ಸುತ್ತು ಗುಂಡು ಹಾರಿಸಿದರು, ಅವರು ಒಟ್ಟು ಮೂರರಿಂದ ನಾಲ್ಕು ಜನರಿದ್ದರು. ನನ್ನ ವಾಹನದ ಟೈರ್‌ಗಳು ಪಂಕ್ಚರ್ ಆಗಿದೆ, ನಾನು ಇನ್ನೊಂದು ವಾಹನದಲ್ಲಿ ಹೊರಟೆ” ಎಂದು ಎಐಎಂಐಎಂ ಮುಖ್ಯಸ್ಥರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಏತನ್ಮಧ್ಯೆ, ಎಐಎಂಐಎಂ ಮುಖ್ಯಸ್ಥರ ವಾಹನದ ಮೇಲಿನ ದಾಳಿಯನ್ನು ಉತ್ತರ ಪ್ರದೇಶದ ಸಚಿವ ಮೊಹ್ಸಿನ್ ರಜಾ ಖಂಡಿಸಿದ್ದಾರೆ ಮತ್ತು ಇದು ದುರದೃಷ್ಟಕರ ಘಟನೆಯಾಗಿದ್ದು, ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.
ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಬಿಜೆಪಿ ವಕ್ತಾರ ಅನಿಲಾ ಸಿಂಗ್, ದಾಳಿಗೆ ಕಾರಣರಾದವರು ಕಂಬಿ ಹಿಂದೆ ಇರುತ್ತಾರೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಜಮ್ಮು-ಕಾಶ್ಮೀರ : ಮೂವರು ಲಷ್ಕರ್ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಆಲ್​ ಇಂಡಿಯಾ ಮಸ್ಲಿಸ್​​-ಎ- ಇತ್ತೆಹಾದುಲ್​ ಮುಸ್ಲಿಮೀನ್​(ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಅನೇಕ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದ್ದು, ಅವರ ಪರವಾಗಿ ಪ್ರಚಾರ ನಡೆಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement